Share this news

ಬೆಂಗಳೂರು: ರಾಜ್ಯದ ಮಹಿಳೆಯರು ಎದುರು ನೋಡುತ್ತಿರುವ ಗೃಹಲಕ್ಷ್ಮಿ ಯೋಜನೆಗೆ ಇಂದು(ಜುಲೈ 19) ಚಾಲನೆ ಸಿಗಲಿದೆ. ಬೆಂಗಳೂರಿನಲ್ಲಿ ಸಂಜೆ 5 ಗಂಟೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಇಂದಿನಿAದಲೇ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗುತ್ತದೆ. ಆಗಸ್ಟ್ನಲ್ಲಿ ಗೃಹಲಕ್ಷ್ಮಿಯರ ಖಾತೆಗೆ 2 ಸಾವಿರ ಹಣ ಜಮೆಯಾಗಲಿದೆ.

ಗೃಹಲಕ್ಷ್ಮೀ ಯೋಜನೆಯಡಿ ಅರ್ಜಿ ಸಲ್ಲಿಕೆ ಎಸ್‌ಎಂಎಸ್ ಮೂಲಕ ಆರಂಭವಾಗಲಿದೆ. ಮೊದಲಿಗೆ ನಿಮ್ಮ ಪಡಿತರ ಚೀಟಿ ಸಂಖ್ಯೆಯನ್ನು 8147500500 ಸಂಖ್ಯೆಗೆ ಎಸ್‌ಎಮ್‌ಎಸ್ ಮಾಡ್ಬೇಕು. ಹೀಗೆ ಎಸ್‌ಎಂಎಸ್ ಮಾಡುತ್ತಿದ್ದಂತೆಯೇ ಎರಡೇ ಸೆಕೆಂಡ್‌ನಲ್ಲೇ ಇಲಾಖೆಯಿಂದ ನಿಮಗೆ ಮೇಸೇಜ್ ಬರಲಿದೆ. ಅದರಲ್ಲಿ ಸ್ಥಳ, ಗೊತ್ತುಪಡಿಸಿದ ದಿನಾಂಕ, ಸಮಯ ಸಂದೇಶ ಬರಲಿದೆ. ಅದೇ ದಿನ, ಅದೇ ಸಮಯಕ್ಕೆ ಹೋಗಿ ಅರ್ಜಿ ಸಲ್ಲಿಸಬಹುದು. ಇನ್ನು ಅರ್ಜಿ ಸಲ್ಲಿಸಲು ಮನೆ ಒಡತಿ ಹೆಸರು ಇರುವ ಪಡಿತರ ಕಾರ್ಡ್ ಕಡ್ಡಾಯವಾಗಿದ್ದು, ಇದರ ಜತೆ ಮನೆ ಯಜಮಾನಿಯ ಆಧಾರ್ ಕಾರ್ಡ್ ಹಾಗೂ ಮೊಬೈಲ್ ಕೂಡಾ ತೆಗೆದುಕೊಂಡು ಹೋಗಬೇಕು. ಮನೆ ಒಡತಿಯ ಪತಿಯ ಆಧಾರ್‌ಕಾರ್ಡ್ ಕೂಡಾ ಕಡ್ಡಾಯವಾಗಿದೆ.


ಒಂದು ವೇಳೆ ಪತಿ ತೆರಿಗೆದಾರರಾಗಿದ್ದರೆ ಅಂಥವರ ಅಕೌಂಟ್‌ಗೆ ಹಣ ಬರುವುದಿಲ್ಲ. ಇನ್ನು ಆಧಾರ್‌ಗೆ ಲಿಂಕ್ ಆಗಿರೋ ಅಕೌಂಟ್ ಬಿಟ್ಟು, ನಿಮ್ಮದೆ ಬೇರೆ ಅಕೌಂಟ್‌ಗೆ ಹಣ ಬೇಕಾದ್ರೆ ಪಾಸ್‌ಬುಕ್‌ನ ಜೆರಾಕ್ಸ್ ಪ್ರತಿ ತೆಗೆದುಕೊಂಡು ಹೋಗಬೇಕು. ಗೃಹಲಕ್ಷ್ಮಿಯರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿಲ್ಲ. ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಸೇರಿದಂತೆ ಸರ್ಕಾರಿ ಕೇಂದ್ರಗಳಲ್ಲಿ ಮಾತ್ರ ಅರ್ಜಿ ಸ್ವೀಕರಿಸಲಾಗುತ್ತದೆ. ಅಂತೂ ಇಂತೂ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾಗ ಗೃಹಲಕ್ಷ್ಮೀ ಯೋಜನೆ ಇಂದಿನಿAದ ಶುರುವಾಗಲಿದೆ. ಅರ್ಜಿ ಹಾಕಲು ಯಾವುದೇ ಮಧ್ಯವರ್ತಿಗಳ ಮೊರೆಹೋಗುವ ಅಗತ್ಯವಿಲ್ಲ. ಗೊಂದಲವಿದ್ದರೆ 1902 ನಂಬರ್‌ಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಿ.

Leave a Reply

Your email address will not be published. Required fields are marked *