ಬೆಂಗಳೂರು: ಕರ್ನಾಟಕ ಹೈಕೋರ್ಟ್ನ 6 ಮಂದಿ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ ಸಂದೇಶ ಬಂದಿದ್ದು, ಪಾಕಿಸ್ತಾನ ಮೂಲದ ಉಗ್ರರ ಕೈವಾಡವೇ ಎಂಬ ಶಂಕೆ ವ್ಯಕ್ತವಾಗಿದೆ. ಹಣಕ್ಕಾಗಿ ಬೇಡಿಕೆ ಇಟ್ಟಿರುವ ದುಷ್ಕರ್ಮಿಗಳು, ಇದನ್ನು ಈಡೇರಿಸದಿದ್ದರೆ ಕೊಲೆ ದುಬೈ ಗ್ಯಾಂಗ್ನಿಂದ ಕೊಲೆ ಮಾಡಿಸುವುದಾಗಿ ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ಹೈಕೋರ್ಟ್ನ ಸಾರ್ವಜನಿಕ ಸಂಪರ್ಕಾಧಿಕಾರಿ ಕೆ. ಮುರಳೀಧರ್ಗೆ ಸಂದೇಶ ಬಂದಿದೆ.
50 ಲಕ್ಷ ರೂಪಾಯಿ ಬ್ಯಾಂಕ್ ಖಾತೆಗೆ ಜಮೆ ಮಾಡಬೇಕು ಎಂದು ಬೇಡಿಕೆ ಇಡಲಾಗಿದ್ದು, ಪಾಕಿಸ್ತಾನ ಮೂಲದ ಬ್ಯಾಂಕ್ ಖಾತೆ ನಂಬರ್ ನೀಡಿದ್ದಾರೆ. ಅಲೈಡ್ ಬ್ಯಾಂಕ್ ಲಿಮಿಟೆಡ್ನ ಖಾತೆಯ ಸಂಖ್ಯೆಯನ್ನು ದುಷ್ಕರ್ಮಿಗಳು ನೀಡಿದ್ದಾರೆ. ಕೊಲೆ ಮಾಡಿಸುವುದಾಗಿ ವಾಟ್ಸ್ಆ್ಯಪ್ ಮೂಲಕವೂ ಬೆದರಿಕೆ ಸಂದೇಶ ಕಳುಹಿಸಲಾಗಿದೆ.
ಬೆದರಿಕೆ ಸಂಬಂಧ ಸೆಂಟ್ರಲ್ ಕ್ರೈಮ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ವಾಟ್ಸ್ಆ್ಯಪ್ ಸಂದೇಶದ ಆಧರಿಸಿ ಎಫ್ಐಆರ್ ದಾಖಲಿಸಲಾಗಿದೆ.