ಕಾರ್ಕಳ :ಅಕ್ರಮವಾಗಿ ದನಗಳನ್ನು ಕದ್ದು ವಾಹನದಲ್ಲಿ ತುಂಬಿಸಿಕೊAಡು ಪರಾರಿಯಾಗುತ್ತಿದ್ದ ವಾಹನವನ್ನು ಬಜರಂಗದಳದ ಕಾರ್ಯಕರ್ತರು ಬೆನ್ನಟ್ಟಿ ಗೋವುಗಳನ್ನು ರಕ್ಷಿಸಿದ ಘಟನೆ ಬಜಗೋಳಿಯಲ್ಲಿ ನಡೆದಿದೆ.
ಕಾರ್ಕಳ ತಾಲೂಕಿನ ಕೆರ್ವಾಶೆ ಎಂಬಲ್ಲಿ ನಾಲ್ಕು ಜಾನುವಾರುಗಳನ್ನು ನಂಬರ್ ಪ್ಲೇಟ್ ಇಲ್ಲದ ಸ್ಕಾರ್ಪಿಯೋ ವಾಹನದಲ್ಲಿ ಕೈಕಾಲು ಕಟ್ಟಿ ಅಮಾನುಷ ರೀತಿಯಲ್ಲಿ ತುಂಬಿಸಿಕೊAಡು ಬಜಗೋಳಿ ಕಡೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಬಜರಂಗದಳ ಕಾರ್ಯಕರ್ತರು ಅನುಮಾನಗೊಂಡು ಸ್ಕಾರ್ಪಿಯೋ ವಾಹನವನ್ನು ಬೆನ್ನಟ್ಟಿದ್ದಾರೆ. ಇದರಿಂದ ಭಯಭೀತರಾದ ದುಷ್ಕರ್ಮಿಗಳು ಗೋಸಾಗಾಟ ಮಾಡುತ್ತಿದ್ದ ಸ್ಕಾರ್ಪಿಯೋವನ್ನು ಬಜಗೋಳಿಯಲ್ಲಿ ಬಿಟ್ಟು ಪರಾರಿಯಾಗಿದ್ದಾರೆ.
ಘಟನೆಯ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ ಮೇರೆಗೆ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಜಾನುವಾರುಗಳನ್ನು ರಕ್ಷಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.