Share this news

ಬೆಳಗಾವಿ: ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಸೇವಾ ಕೇಂದ್ರಗಳು ದುಡ್ಡು ಪಡೆದರೆ ಅಥವಾ ಅಸಡ್ಡೆ ತೋರಿದರೆ ಅಂತಹವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಎಚ್ಚರಿಕೆ ನೀಡಿದ್ದಾರೆ.

ಸೋಮವಾರ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈಗಾಗಲೇ ಮೂರು ಜನರ ಲಾಗಿನ್ ಐಡಿ ವಾಪಸ್ಸು ಪಡೆಯಲಾಗಿದೆ. ಸರಕಾರವಾಗಲಿ ಇಲಾಖೆಯಾಗಲಿ, ಸುಮ್ಮನೆ ಕುಳಿತಿಲ್ಲ ಅಂತಹವರ ಮೇಲೆ ಕ್ರಿಮಿನಲ್ ಪ್ರಕರಣವನ್ನು ಸಹ ದಾಖಲಿಸಲಾಗುವುದು ಎಂದರು.

ಗೃಹಲಕ್ಷ್ಮಿ ಯೋಜನೆಯನ್ನು ಮಹಿಳೆಯರು ಉಚಿತವಾಗಿ ಮಾಡಿಸಿಕೊಳ್ಳಬೇಕೆಂದು ಜಾರಿ ಮಾಡಿದ್ದೇವೆ. ಅದರಲ್ಲೂ ದುಡ್ಡು ಪಡೆಯುತ್ತಿರುವುದು ಗಮನಕ್ಕೆ ಬಂದರೆ ಅಂತಹ ಅವರ ಲಾಗಿನ್ ಐಡಿ ಮತ್ತು ಪಾಸ್ವರ್ಡ್ ವಾಪಸ್ ಪಡೆದು ಪ್ರಕರಣ ದಾಖಲಿಸಲು ಸೂಚಿಸಲಾಗಿದೆ.

ತಹಶೀಲ್ದಾರ್, ಪಿ ಡಿ ಓ, ಗ್ರಾಮ ಲೆಕ್ಕಾಧಿಕಾರಿ ಸೇರಿದಂತೆ ಯಾರೇ ಆಗಲಿ ಹಣ ಪಡೆಯುವುದು ಗಮನಕ್ಕೆ ಬಂದರೆ ತಕ್ಷಣವೇ ಜಿಲ್ಲಾಧಿಕಾರಿಗಳ ಗಮನಕ್ಕೆ ತರಬೇಕು. ಸ್ಥಳೀಯ ಪೊಲೀಸ್ ಠಾಣೆಗೆ ತಿಳಿಸಬೇಕು ಒಂದುವೇಳೆ ಅಸಡ್ಡೆ ಮಾಡಿದರೆ ಅವರೂ ಜವಾಬ್ದಾರರಾಗುತ್ತಾರೆ ಎಂದರು.

ನಾವು ಯಾರಿಂದಲೂ ಉಚಿತವಾಗಿ ಮಾಡಿಸಿಕೊಳ್ಳುತ್ತಿಲ್ಲ ಆಪ್ ಲೋಡ್ ಮಾಡುವವರಿಗೆ ಸರಕಾರದಿಂದಲೇ ಪ್ರತಿ ಅರ್ಜಿಗೆ 12 ರೂ. ನೀಡಲಾಗುತ್ತಿದೆ. 10 ರೂಪಾಯಿ ಅಪ್ ಲೋಡ್ ಮಾಡಲು ಹಾಗೂ 2 ರೂ. ಪ್ರಿಂಟ್ ಔಟ್ ಕೊಡಲು ನೀಡಲಾಗುತ್ತಿದೆ. ಹಾಗಾಗಿ ಜನರು ಯಾರಿಗೂ ದುಡ್ಡು ಕೊಡಬಾರದು ಕೊಡಬೇಕಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Leave a Reply

Your email address will not be published. Required fields are marked *