Share this news

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗುವಲ್ಲಿ ನೆರವಾಗಿದ್ದ ಐದು ಗ್ಯಾರಂಟಿ ಯೋಜನೆಗಳೇ ಇದೀಗ ವಿವಾದ ಸೃಷ್ಟಿಸಿದ್ದು,ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಸಿದ್ಧಪಡಿಸಿ ಚುನಾವಣಾ ಪೂರ್ವದಲ್ಲಿ ಮತದಾರರಿಗೆ ಹಂಚುವ ಮೂಲಕ ಆಮಿಷವೊಡ್ಡಿ ಅಧಿಕಾರ ಬಂದಿದೆ,ಆದ್ದರಿಂದ ಸಿಎಂ ಸಿದ್ದರಾಮಯ್ಯ ಅವರ ಶಾಸಕ ಸ್ಥಾನ ಅಸಿಂಧುಗೊಳಿಸುವಂತೆ ಕೋರಿ ಅರ್ಜಿದಾರರಾದ ಕೆ.ಎಂ ಶಂಕರ್ ಎಂಬವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಐದು ಗ್ಯಾರಂಟಿ ಯೋಜನೆಗಳು ಜಾರಿ ಮಾಡುತ್ತೇವೆ ಎಂದು ಮತದಾರರನ್ನು ತಮ್ಮತ್ತ ಸೆಳೆಯಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಸಹಿ ಹಾಕಿರುವ ಗ್ಯಾರಂಟಿ ಕಾರ್ಡ್​ಗಳನ್ನು​ ಚುನಾವಣಾ ಪೂರ್ವದಲ್ಲಿ ರಾಜ್ಯಾದ್ಯಂತ ಹಂಚಲಾಗಿತ್ತು.

ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್ 123 (1) ಪ್ರಕಾರ ಮತದಾರರಿಗೆ ಆಮಿಷ ಒಡ್ಡುವಂತಿಲ್ಲ. ಆದರೆ ಕಾಂಗ್ರೆಸ್ ಪಕ್ಷವು ಮತದಾರರಿಗೆ ಗ್ಯಾರಂಟಿ‌ ಕಾರ್ಡ್ ವಿತರಿಸಿ ಆಮಿಷ ಒಡ್ಡಿದೆ ಎಂದು ಆರೋಪಿಸಿರುವ ಅರ್ಜಿದಾರರು ಸಿದ್ದರಾಮಯ್ಯ ಅವರ ಶಾಸಕ ಸ್ಥಾನದ ಆಯ್ಕೆ ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.ಸಲ್ಲಿಕೆಯಾದ ಅರ್ಜಿ ಕುರಿತು ಕಚೇರಿ ಆಕ್ಷೇಪಣೆಗಳನ್ನು ಸರಿಪಡಿಸುವಂತೆ ಹೈಕೋರ್ಟ್ ಸೂಚನೆ ನೀಡಿ ವಿಚಾರಣೆಯನ್ನು ಜುಲೈ 28ಕ್ಕೆ ಮುಂದೂಡಿದೆ.

Leave a Reply

Your email address will not be published. Required fields are marked *