Share this news

ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿದ ರೆ‌ನಾಲ್ಟ್ ಡಸ್ಟರ್ ಕಾರೊಂದು ಹಿರ್ಗಾನ ಗ್ರಾಮದ ನೆಲ್ಲಿಕಟ್ಟೆ ತಿರುವಿನಲ್ಲಿ ಪಲ್ಟಿಯಾದ ಘಟನೆ ಶುಕ್ರವಾರ ಮುಂಜಾನೆ ಸಂಭವಿಸಿದೆ.
ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಕಾಡುಹೊಳೆ ಜನಪ್ರಿಯ ರೈಸ್ ಮಿಲ್ ಪಾಲುದಾರ ಕೆ.ಮಂಜುನಾಥ ಎಂಬವರಿಗೆ ಸೇರಿದ ಕಾರು ಶುಕ್ರವಾರ ಮುಂಜಾನೆ ಕಾಡುಹೊಳೆ‌‌ ಕಡೆಯಿಂದ ಕಾರ್ಕಳದ ಕಡೆಗೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ.
ಕಾರು ಚಾಲಕನ ಅತೀವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಚಾಲಕ ಗಾಯಗಳಿಲ್ಲದೇ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ

Leave a Reply

Your email address will not be published. Required fields are marked *