ಮೂಲ್ಕಿ: . ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು ಮಾರ್ಗದರ್ಶನದಲ್ಲಿ ಜಿಲ್ಲಾ, ರಾಜ್ಯ, ತುಳು ಸಾಹಿತ್ಯ ಅಕಾಡೆಮಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸುಬ್ರಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಆಟಿದ ನೆನಪು-2023 ಕಾರ್ಯಕ್ರಮ ಜರಗಿತು.
ನೆಹರು ಯುವ ಕೇಂದ್ರದ ಆಡಳಿತಾಧಿಕಾರಿ ಜಗದೀಶ್ ಕೆ. ದೀಪ ಬೆಳಗಿಸಿ, ಹಲಸಿನ ಹಣ್ಣನ್ನು ತುಂಡರಿಸಿ, ಸಾಂಪ್ರದಾಯಿಕವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಆಟಿ ತಿಂಗಳ ಕಟ್ಟುಪಾಡುಗಳು ತುಳುನಾಡಿನ ವಿಶಿಷ್ಟ ಸಂಸ್ಕೃತಿ. ಅಲ್ಲದೆ ತುಳುನಾಡಿನ ಸಂಪ್ರದಾಯಗಳನ್ನು ಬಿಂಬಿಸುವ ಇಂಥ ಆಚರಣೆಗಳನ್ನು ಸ್ಪೋರ್ಟ್ಸ್ ಕ್ಲಬ್ ವತಿಯಿಂದ ನಡೆಸಿಕೊಂಡು ಬರುತ್ತಿರುವುದು ಶ್ಲಾಘನೀಯ ಎಂದರು.
ಮುಖ್ಯ ಅತಿಥಿಗಳಾಗಿದ್ದ ಮಂಗಳೂರು ಎಂ ಆರ್ ಪಿ ಎಲ್ ,ಓ ಎನ್ ಜಿ ಸಿ ನಿವೃತ್ತ ಮಹಾ ಪ್ರಬಂಧಕರಾದ ವೀಣಾ ಟಿ.ಶೆಟ್ಟಿ ಮಾತನಾಡಿ, ಆಷಾಢ ತಿಂಗಳ ಆಚಾರ ವಿಚಾರಗಳು, ನಮ್ಮ ಪೂರ್ವಜರ ಆಟಿ ತಿಂಗಳ ಜೀವನ ಕ್ರಮ, ಇಂದಿನ ಪೀಳಿಗೆಗೆ ಇವೆಲ್ಲವುಗಳ ಬಗ್ಗೆ ತಿಳಿದುಕೊಳ್ಳಬೇಕಾದ ಅಗತ್ಯತೆಗಳ ಬಗ್ಗೆ ಮಾಹಿತಿ ನೀಡಿದರು.
ಎಂ ಆರ್ ಪಿ ಎಲ್, ಓ ಎನ್ ಜಿ ಸಿ ಕರ್ಮಾಚಾರಿ ಸಂಘದ ಅಧ್ಯಕ್ಷನಿತಿನ್ ಹೆಚ್ ಯು ಮಾತನಾಡಿ, ಅನಾದಿಕಾಲದಿಂದಲೂ ತುಳುನಾಡಿನಲ್ಲಿ ಆಟಿ ತಿಂಗಳಿಗೆ ವಿಶೇಷವಾದ ಮಹತ್ವ ಇದೆ. ಆರೋಗ್ಯಕರ ಹಾಗೂ ನೈಸರ್ಗಿಕ ಸೊಪ್ಪು ತರಕಾರಿಗಳ ವಿಶಿಷ್ಟ ಆಹಾರ ಪದಾರ್ಥಗಳ ಆಟಿ ತಿಂಗಳಲ್ಲಿ ತಯಾರಿಸಲಾಗುತ್ತದೆ. ಇಂತಹ ವಿಶಿಷ್ಟ ಆಚರಣೆಗಳನ್ನು ಉಳಿಸಿ ಬೆಳೆಸಿಕೊಂಡು ಹೋಗಲು ಆದ್ಯತೆ ನೀಡಬೇಕು ಎಂದರು.
ಸ್ಪೋರ್ಟ್ಸ್ ಕ್ಲಬ್ನ ಗೌರವಾಧ್ಯಕ್ಷ ಪ್ರಶಾಂತ್ ಕುಮಾರ್ ಬೇಕಲ್, ಅಧ್ಯಕ್ಷ ಜಗದೀಶ್ ಕುಲಾಲ್, ಮಹಿಳಾ ಕಾರ್ಯಧ್ಯಕ್ಷೆ ಯಶೋಧ ದೇವಾಡಿಗ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬೆಲ್ಲ ,ಉರಿ ಕಡಲೆ, ಕರಿ ಮೆಣಸಿನ ಕಷಾಯ ಆಥಿತ್ಯ ನೀಡಿ, ತುಳುನಾಡಿನ ಆಟಿ ತಿಂಗಳಿನಲ್ಲಿ ತಯಾರಿಸಿದ ವಿವಿಧ 36 ಬಗೆಯ ಆಹಾರ ಪದಾರ್ಥಗಳು ಸುಮಾರು 250 ಜನರಿಗೆ ಉಣಬಡಿಸಲಾಯಿತು. ತುಳುನಾಡಿನ ಜನಜೀವನದ ಹಿರಿಮೆಯನ್ನು ನೆನಪಿಸುವ ಹಳೆಯ ಪರಿಕರಗಳನ್ನು ಪ್ರದರ್ಶನಕ್ಕೆ ಇರಿಸಲಾಗಿದ್ದು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿತ್ತು.
ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಸುಗಂಧಿ ಡಿ.ಕೊಂಡಾನ, ಸದಸ್ಯರಾದ ವಿನೋದ್ ಕುಮಾರ್ ಬೋಳ್ಳೂರು, ಬಾಳ ಗ್ರಾಮ ಪಂಚಾಯತ್ ಕಾರ್ಯದರ್ಶಿ ಲೋಕನಾಥ್ ಭಂಡಾರಿ, ಗ್ರಾಮ ಪಂಚಾಯತ್ ಸದಸ್ಯರಾದ ಮೋಹನ್ ದಾಸ್, ಸಂತೋಷ್ ಕುಮಾರ್, ಹೇಮನಾಥ ಅಮೀನ್, ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಹರಿದಾಸ್ ಭಟ್, ಸದಸ್ಯರಾದ ಯೋಗೀಶ್ ಕೋಟ್ಯಾನ್, ಲಯನ್ಸ್ ಮತ್ತು ಲಿಯೋ ಕ್ಲಬ್ ಇದರ ಮಾಜಿ ಅಧ್ಯಕ್ಷರಾದ ವಿಜಯಕುಮಾರ್ ಶೆಟ್ಟಿ, ಸುಮಿತ್ರ ಶೆಟ್ಟಿ, ಸ್ಪೋರ್ಟ್ಸ್ ಕ್ಲಬ್ಬಿನ ಗೌರವ ಮಾರ್ಗದರ್ಶಕರಾದ ಶಿವಾನಂದ ಪದ್ಮಶಾಲಿ, ನಾರಾಯಣ್ ಜಿ.ಕೆ, ಲಕ್ಷ್ಮಣ ಸಾಲ್ಯಾನ್ ಕೆರೆಕಾಡು,ದಿನಕರ್ ಲೈಟ್ ಹೌಸ್, ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಮಹಿಳಾ ಸದಸ್ಯರು, ಮಕ್ಕಳು ಹಾಗೂ ಗ್ರಾಮಸ್ಥರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಮಹಿಳಾ ಜೊತೆ ಕಾರ್ಯದರ್ಶಿ ಸುರೇಖಾ ಕಲ್ಲಾಪು, ಆಟಿ ತಿನಸುಗಳ, ಅವುಗಳನ್ನು ತಯಾರಿಸಿ ತಂದವರ ಪಟ್ಟಿಯನ್ನು ಮಾಹಿತಿ ನೀಡಿದರು. ಪ್ರಧಾನ ಕಾರ್ಯದರ್ಶಿ ದೀಪಕ್ ಸುವರ್ಣ ವಂದಿಸಿ, ನಿಕಟ ಪೂರ್ವ ಕಾರ್ಯಾಧ್ಯಕ್ಷ ಸುರೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.