ಬೆಂಗಳೂರು: ಸಿಬಿಎಸ್ಇ ಹಾಗೂ ಐಸಿಎಸ್ಇ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡವನ್ನು ಒಂದು ವಿಷಯವಾಗಿ ಹೇರಿರುವುದನ್ನು ಪ್ರಶ್ನಿಸಿ, ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಹೈಕೋರ್ಟ್ ಬುಧವಾರ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ
ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ನೇತೃತ್ವದ ವಿಭಾಗೀಯ ಪೀಠವು ಈ ಹಂತದಲ್ಲಿ ಯಾವುದೇ ಮಧ್ಯಂತರ ಆದೇಶವನ್ನು ನೀಡಲು ನಿರಾಕರಿಸಿತು ಮತ್ತು ವಿಚಾರಣೆಯನ್ನು ಎರಡು ವಾರಗಳಿಗೆ ಮುಂದೂಡಿತು.
ಸಿ ಸೋಮಶೇಖರ್ ಮತ್ತು ಇತರ 19 ಮಂದಿ ವಿವಿಧ ಸಿಬಿಎಸ್ಇ ಮತ್ತು ಐಸಿಎಸ್ಇ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಪೋಷಕರು ಮತ್ತು ಶಿಕ್ಷಕರು ಈ ಸಂಬAಧ ಅರ್ಜಿ ಸಲ್ಲಿಸಿದ್ದಾರೆ. ಕರ್ನಾಟಕ ಭಾಷಾ ಕಲಿಕೆ ಕಾಯ್ದೆ, ನಿಯಮಗಳು ಮತ್ತು ಎನ್ಒಸಿ ನಿಯಮಗಳ ನಿಬಂಧನೆಗಳ ಸಂಯೋಜಿತ ಪರಿಣಾಮವೆಂದರೆ ಸಿಬಿಎಸ್ಇ ಮತ್ತು ಐಸಿಎಸ್ಇ ಮಂಡಳಿಗಳೊAದಿಗೆ ಸಂಯೋಜಿತವಾಗಿರುವ ರಾಜ್ಯದ ಶಾಲೆಗಳು ಕನ್ನಡವನ್ನು ಪ್ರಥಮ, ದ್ವಿತೀಯ ಅಥವಾ ತೃತೀಯ ಭಾಷೆಯಾಗಿ ಕಲಿಸಬೇಕಾಗುತ್ತದೆ ಎಂದು ಅರ್ಜಿ ಸಲ್ಲಿಸಲಾಗಿದೆ.
ಎನ್ಒಸಿ ನಿಯಮಗಳ ಪ್ರಕಾರ ಕನ್ನಡವನ್ನು ಎರಡನೇ ಅಥವಾ ಮೂರನೇ ಭಾಷೆಯಾಗಿ ಕಲಿಸಬೇಕು. ಕರ್ನಾಟಕ ಭಾಷಾ ಕಲಿಕೆ ಕಾಯಿದೆ, 2015 ರ ಸೆಕ್ಷನ್ 3, ಕರ್ನಾಟಕ ಭಾಷಾ ಕಲಿಕೆಯ ನಿಯಮಗಳು 2017 ರ ನಿಯಮ 3 ಮತ್ತು ಕರ್ನಾಟಕ ಶಿಕ್ಷಣ ಸಂಸ್ಥೆಗಳ ನಿಯಮ 6 (2) (ನಿರಾಕ್ಷೇಪಣಾ ಪ್ರಮಾಣಪತ್ರ ನೀಡುವಿಕೆ ಮತ್ತು ನಿಯಂತ್ರಣ) ನಿಯಮಗಳು, 2022 ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಅವಶ್ಯಕತೆಯನ್ನು ಅನುಸರಿಸಲು ವಿಫಲವಾದರೆ ನಿಯಮ 6 (5) ರ ಪ್ರಕಾರ ಶಿಕ್ಷಣ ಸಂಸ್ಥೆಗೆ ನೀಡಲಾದ ನಿರಾಕ್ಷೇಪಣೆಯನ್ನು ಹಿಂತೆಗೆದುಕೊಳ್ಳಬಹುದು.
ಈ ಕಾಯ್ದೆಗಳು ಕರ್ನಾಟಕ ರಾಜ್ಯದ ಶಾಲಾ ವಿದ್ಯಾರ್ಥಿಗಳು ತಮ್ಮ ಆಯ್ಕೆಯ ಪ್ರಥಮ, ದ್ವಿತೀಯ ಅಥವಾ ತೃತೀಯ ಭಾಷೆಯನ್ನು ಕಲಿಯುವ ಹಕ್ಕುಗಳನ್ನು ತೀವ್ರವಾಗಿ ಮತ್ತು ಪೂರ್ವಾಗ್ರಹ ಪೀಡಿತವಾಗಿ ಪರಿಣಾಮ ಬೀರುತ್ತವೆ. ಇದು ಮಕ್ಕಳ ಶೈಕ್ಷಣಿಕ ಫಲಿತಾಂಶಗಳ ಮೇಲೆ ಮಹತ್ತರವಾದ ಪರಿಣಾಮಗಳನ್ನು ಹೊಂದಿದೆ ಮತ್ತು ಭವಿಷ್ಯದಲ್ಲಿ ಅವರ ಶೈಕ್ಷಣಿಕ ಮತ್ತು ಉದ್ಯೋಗಾವಕಾಶಗಳ ಮೇಲೆ ಪೂರ್ವಾಗ್ರಹದ ಪರಿಣಾಮ ಬೀರುತ್ತದೆ. ಈ ಕಾಯಿದೆಗಳು ಶಾಲೆಗಳಲ್ಲಿ ಕನ್ನಡವನ್ನು ಹೊರತುಪಡಿಸಿ ಬೇರೆ ಭಾಷೆಗಳನ್ನು ಕಲಿಸುವ ಶಿಕ್ಷಕರ ಜೀವನೋಪಾಯದ ಮೇಲೆ ಗಂಭೀರ ಪರಿಣಾಮಗಳನ್ನು ಬೀರುತ್ತವೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.