Share this news

ಸುರತ್ಕಲ್: ಕೇಂದ್ರ ಬಿಜೆಪಿ ಸರಕಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದ್ವೇಷ ರಾಜಕಾರಣ ನಡೆಸುತ್ತಿದೆ ಎಂದು ಆರೋಪಿಸಿ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ಸುರತ್ಕಲ್ ಜಂಕ್ಷನ್ ನಲ್ಲಿ ಮೌನ ಪ್ರತಿಭಟನೆ ನಡೆಸಿತು.

ಈ ಸಂದರ್ಭದಲ್ಲಿ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪುರುಷೋತ್ತಮ್ ಚಿತ್ರಾಪುರ, ಇಂಟಕ್ ಜಿಲ್ಲಾಧ್ಯಕ್ಷ ಮನೋಹರ್ ಶೆಟ್ಟಿ, ಪಿಕೆ ಸುರೇಶ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮುಹಮ್ಮದ್ ಸಮೀರ್ ಕಾಟಿಪಳ್ಳ, ಎಂ ಜಿ ಹೆಗಡೆ, ಮಾಜಿ ಮೇಯರ್ ಗುಲ್ಜಾರ್ ಬಾನು, ಮಾಜಿ ಅಧ್ಯಕ್ಷ ಸದಾಶಿವ ಶೆಟ್ಟಿ, ಶ್ರೀಕಾಂತ್ ಸಾಲಿಯಾನ್, ರವಿ ಶ್ರೀಯನ್, ರಾಘವೇಂದ್ರ ರಾವ್, ಜಲೀಲ್ ಬದ್ರಿಯಾ, ರೆಹಮಾನ್ ಖಾನ್ ಕುಂಜತ್ತಬೈಲ್, ಜಿಲ್ಲಾ ಉಪಾಧ್ಯಕ್ಷ, ಶಶಿಕಲ ಪದ್ಮನಾಭ, ಸಾರಿಕಾ ಪೂಜಾರಿ, ರಾಜೇಶ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು

 

Leave a Reply

Your email address will not be published. Required fields are marked *