ಮಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಲ್ಲಿ ಲೋಕಾಯುಕ್ತ ಪೊಲೀಸರಿಂದ ಬಂಧಿತರಾಗಿರುವ ಕೆ.ಆರ್ ಪುರಂ ನ ತಹಶೀಲ್ದಾರ್ ಆಗಿದ್ದ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮೂಲದ ಅಜಿತ್ ಕುಮಾರ್ ರೈ ಅವರನ್ನು ಸರಕಾರಿ ಸೇವೆಯಿಂದ ಅಮಾನತುಗೊಳಿಸಿ ಕಂದಾಯ ಇಲಾಖೆಯ ಉಪ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ಅಜಿತ್ ಕುಮಾರ್ ರೈ ಇವರು ತಮ್ಮ ಬಲ್ಲ ಮೂಲಗಳ ಆದಾಯಕ್ಕಿಂತ 69. 80% ರಷ್ಟು ಹೆಚ್ಚಿನ ಅಕ್ರಮ ಆಸ್ತಿ ಹೊಂದಿರುವುದು ಲೋಕಾಯುಕ್ತ ದಾಳಿಯಲ್ಲಿ ಪ್ರಾಥಮಿಕ ತನಿಖೆಯಿಂದ ದೃಢಪಟ್ಟಿರುವ ಕಾರಣದಿಂದ ಹಾಗೂ ಸದ್ರಿಯವರು ದಿನಾಂಕ 28.6.2023 ರಿಂದ ನ್ಯಾಯಾಂಗ ಬಂಧನದಲ್ಲಿರುವುದು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳು 1957ರ ನಿಯಮ 10 (1) (ಎ) (ಎ) ಮತ್ತು 10 (2) (ಎ) ಅನ್ವಯ ದಿ.28/6/23 ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಇಲಾಖಾ ವಿಚಾರಣೆ ಬಾಕಿ ಇರಿಸಿ ಸರಕಾರಿ ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಿದೆ.