ಕಾರ್ಕಳ: ಇನ್ನಾ ಗ್ರಾಮದಲ್ಲಿ ಸಚಿವ ಸುನಿಲ್ ಕುಮಾರ್ ರವರು ಮಾಡಿದ ಅಭಿವೃದ್ಧಿ ಕಾರ್ಯಕ್ರಮ ಗಳನ್ನು ಬೆಂಬಲಿಸಿ ಇನ್ನಾ ಗ್ರಾಮದ 2 ನೇ ಬೂತ್ ನ ಯೂತ್ ಕಾಂಗ್ರೆಸ್ ಅದ್ಯಕ್ಷರಾಗಿದ್ದ ಗೋವಿಂದ ರಾಜು ಅವರು ತಮ್ಮ ಬೆಂಬಲಿಗರೊAದಿಗೆ ಸಚಿವರ ಉಪಸ್ಥಿತಿಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಬಿಜೆಪಿ ಮಂಡಲ ಅದ್ಯಕ್ಷ ಮಹಾವೀರ ಹೆಗ್ಡೆ ಪಕ್ಷದ ದ್ವಜ ನೀಡಿ ಸೇರ್ಪಡೆಗೊಂಡವರನ್ನು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ರೇಶ್ಮಾ ಉದಯ ಶೆಟ್ಟಿ, ಪಕ್ಷದ ಪ್ರಮುಖರಾದ ಇನ್ನಾ ಉದಯ ಶೆಟ್ಟಿ, ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ , ಮಹಾ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ , ಇನ್ನಾ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಪುಪ್ಪ, ಮಾಜಿ ತಾಪಂ ಸದಸ್ಯರಾದ ಪ್ರವೀಣ್ ಸಾಲ್ಯಾನ್ ,ರಶ್ಮಿ ಶೆಟ್ಟಿ ಉಪಸ್ಥಿತರಿದ್ದರು.