ಕಾರ್ಕಳ : ಸಾಮಾಜಿಕ ಕಾರ್ಯಕರ್ತ ಕಡೆಕುಂಜ ನಿವಾಸಿ ಪುಷ್ಪರಾಜ್ ಮೂಲ್ಯ ಅವರು ಇನ್ನಾ ಗ್ರಾಮ ಸಮಾವೇಶದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಅವರಿಗೆ ಸಚಿವ ವಿ. ಸುನಿಲ್ ಕುಮಾರ್ ಪಕ್ಷದ ಧ್ವಜ ನೀಡಿ ಬಿಜೆಪಿಗೆ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷ ಮಣಿರಾಜ್ ಶೆಟ್ಟಿ, ಕಾರ್ಕಳ ಬಿಜೆಪಿ ಮಂಡಲ ಅಧ್ಯಕ್ಷ ಮಹಾವೀರ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಜಯರಾಮ್ ಸಾಲಿಯನ್ ಬೋಳ, ಮುಂಡ್ಕೂರು ಮಹಾ ಶಕ್ತಿ ಕೇಂದ್ರದ ಕಾರ್ಯದರ್ಶಿ ಸತೀಶ್ ಪೂಜಾರಿ ಬೋಳ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಇನ್ನಾ ಶಕ್ತಿ ಕೇಂದ್ರದ ಅಧ್ಯಕ್ಷ ದಿನೇಶ್ ಕೋಟ್ಯಾನ್, ವಾರ್ಡ್ ಸದಸ್ಯರಾದ ಮನೋಜ್, ಪ್ರಸಾದ್ ಶೆಟ್ಟಿ, ಪ್ರೇಮ ಕುಲಾಲ್ ಉಪಸ್ಥಿತರಿದ್ದರು.