ಉಡುಪಿ: ಉಡುಪಿ ಶ್ರೀ ಪೂರ್ಣಪ್ರಜ್ಞಾ ಸಂಧ್ಯಾ ಕಾಲೇಜು ಇಕೋ ಕ್ಲಬ್ ವತಿಯಿಂದ ಪ್ಲಾಸ್ಟಿಕ್ ನಿರ್ಮೂಲನೆಗಾಗಿ ಸೈಕಲ್ ಜಾಥಾ ಕಾರ್ಯಕ್ರಮ ಉಡುಪಿಯ ನಗರದಲ್ಲಿ ನಡೆಯಿತು.
ಕಾಲೇಜಿನ ಪ್ರಾಂಶುಪಾಲರಾದ ಡಾ.ಸುಕನ್ಯಾ ಮೇರಿ ಜೆ ಅವರು ಹಸಿರು ನಿಶಾನೆಯನ್ನು ತೋರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಉಪಪ್ರಾಂಶುಪಾಲರಾದ ವಿನಾಯಕ್ ಪೈ, ರೋವರ್ಸ್ ರೇಂಜರ್ಸ್ ಸಂಯೋಜಕರಾದ ದಿನೇಶ್ ಆರ್,ಇಕೋ ಕ್ಲಬ್ ನ ಸಂಯೋಜಕರಾದ ನಾಗರಾಜ್ ಆಚಾರ್ಯ ಗಿಳಿಯಾರು ಉಪಸ್ಥಿತರಿದ್ದರು.
ಕಾಲೇಜಿನ ವಿದ್ಯಾರ್ಥಿಗಳು ಉತ್ಸಾಹದಿಂದ ಜಾಥಾದಲ್ಲಿ ಭಾಗವಹಿಸಿದರು.