ಕಾರ್ಕಳ: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಶೌಚಾಲಯಕ್ಕೆ ಹೋಗಿದ್ದ ಸಂದರ್ಭದಲ್ಲಿ ರಕ್ತದೊತ್ತಡ ಕಡಿಮೆಯಾಗಿ ಕುಸಿದು ಬಿದ್ದು ಬಳಿಕ ತೀವೃ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಿಸಿದರೂ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಮರ್ಣೆ ಗ್ರಾಮದ ಎಣ್ಡೆಹೊಳೆ ರಾಧಾ ನಾಯಕ್ ಶಾಲೆಯ ಬಳಿಯ ನಿವಾಸಿ ಶೇಖರ ಮೂಲ್ಯ (53) ಎಂಬವರು ಮೃತಪಟ್ಟವರು. ಅವರು ಬೇಕರಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದು ಮದ್ಯವ್ಯಸನಿಯಾಗಿದ್ದು, ತಲೆನೋವು ಹಾಗೂ ಜ್ವರ ಉಲ್ಬಣಿಸಿ ರಕ್ತದೊತ್ತಡ ಕಡಿಮೆಯಾಗಿ ಕುಸಿದು ಬಿದ್ದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಈ ಕುರಿತು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ