ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 10ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆ ದಾಖಲಾಗಿದೆ.
ಶನಿವಾರ (ಏಪ್ರಿಲ್ 8) ಮಳೆ ಸುರಿಸುವ ಮಾರುತಗಳು ಹೆಚ್ಚು ಚುರುಕಾಗಿರಲಿವೆ. ಹೀಗಾಗಿ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ, ಉತ್ತರ ಕನ್ನಡ, ಉತ್ತರ ಒಳನಾಡಿನ ಜಿಲ್ಲೆಗಳಾದ ವಿಜಯಪುರ, ಕಲಬುರಗಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಕೋಲಾರ, ಮೈಸೂರು, ರಾಮನಗರ ಜಿಲ್ಲೆಗಳ ಹಲವು ಕಡೆಗಳಲ್ಲಿ ಗುಡುಗು ಸಹಿತ ಅಧಿಕ ಮಳೆ ಆಗಲಿದೆ.
ದಿಢೀರ್ ಹವಾಮಾನದಲ್ಲಿ ಬದಲಾವಣೆಯಾಗಿದ್ದು, ಕೋಲಾರ, ಮಂಡ್ಯ, ಮಸೂರು, ಚಾಮರಾಜನಗರ ಹಾಗೂ ಕೊಡಗು ಭಾಗದಲ್ಲಿ ಮಳೆರಾಯ ಅಬ್ಬರಿಸಲಿದ್ದಾನೆ. ಬಿರುಗಾಳಿ, ಗುಡುಗು-ಮಿಂಚು ಸಹಿತ ಮಳೆಯಾಗಲಿದೆ ಎಂದು ಪ್ರಕಟಣೆ ತಿಳಿಸಿದೆ



