ನವದೆಹಲಿ: ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಕತಾರ್ ನ್ಯಾಯಾಲಯದಿಂದ ಮರಣದಂಡನೆಗೆ ಗುರಿಯಾಗಿದ್ದ 8 ಮಂದಿ ಭಾರತೀಯ ನೌಕಾಪಡೆಯ ಮಾಜಿ ಸಿಬಂದಿಗಳಿಗೆ ಜೀವದಾನ ಲಭಿಸಿದ್ದು,ರಾಜತಾಂತ್ರಿಕ ಮಾತುಕತೆಯ ಮೂಲಕ ಗಲ್ಲುಶಿಕ್ಷೆಯನ್ನು ರದ್ದುಪಡಿಸಿ ಜೈಲು ಶಿಕ್ಷೆಗೆ ಇಳಿಸಲಾಗಿದೆ.
ಶೃಂಗಸಭೆಯಲ್ಲಿ ಕತಾರ್ನ ಎಮಿರ್ ಶೇಖ್ ತಮೀಮ್ ಬಿನ್ ಹಮದ್ ಅಲ್-ಥಾನಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ವಾರಗಳ ನಂತರ ಈ ಬೆಳವಣಿಗೆ ನಡೆದಿದೆ. ಇನ್ನೂ ಬಹಿರಂಗವಾಗದ ಆರೋಪಗಳಿಗಾಗಿ ಮರಣದಂಡನೆ ಕಡಿತದಿಂದ ಜೈಲು ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ ಎಂದು ಭಾರತ ಸರ್ಕಾರ ತಿಳಿಸಿದೆ. ಮುಂದಿನ ಕ್ರಮಗಳನ್ನು ನಿರ್ಧರಿಸಲು ಕಾನೂನು ತಂಡ ಮತ್ತು ಕುಟುಂಬ ಸದಸ್ಯರೊಂದಿಗೆ ನಿಕಟ ಸಂಪರ್ಕದಲ್ಲಿದ್ದೇವೆ. ನಾವು ಮೊದಲಿನಿಂದಲೂ ಅವರ ಬೆಂಬಲಕ್ಕೆ ನಿಂತಿದ್ದೇವೆ ಮತ್ತು ನಾವು ದೂತಾವಾಸ ಮತ್ತು ಎಲ್ಲಾ ಕಾನೂನು ನೆರವು ನೀಡುವುದನ್ನು ಮುಂದುವರಿಸುತ್ತೇವೆ. ನಾವು ಕತಾರ್ ಅಧಿಕಾರಿಗಳೊಂದಿಗೆ ವಿಷಯ ವಿನಿಮಯ ಮಾಡಿಕೊಳ್ಳುವುದನ್ನು ಮುಂದುವರಿಸುತ್ತೇವೆ ಎಂದು ಭಾರತ ಸರ್ಕಾರ ತಿಳಿಸಿದೆ.
ಇನ್ನು ಈ ಪ್ರಕರಣದ ಎಲ್ಲಾ ಎಂಟು ನೌಕಾಪಡೆಯ ಮಾಜಿ ಯೋಧರಿಗೆ ವಿಭಿನ್ನ ಅವಧಿಯ ಜೈಲು ಶಿಕ್ಷೆಯನ್ನು ನೀಡಲಾಗಿದೆ. ಕಡಿಮೆಯೆಂದರೆ ನಾವಿಕ ರಾಗೇಶ್ಗೆ ಮೂರು ವರ್ಷ ಜೈಲು ಮತ್ತು ಇತರೆ ಏಳು ಮಂದಿಗೆ 10 ವರ್ಷಗಳಿಂದ 25 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗಿದೆ” ಎಂದು ಮೂಲವೊಂದು ತಿಳಿಸಿದೆ. ಅಂತೆಯೇ ಗಲ್ಲುಶಿಕ್ಷೆಯನ್ನು ಜೈಲು ಶಿಕ್ಷೆಯಾಗಿ ಮಾರ್ಪಡಿಸಿದ ಕುರಿತೂ ಮಾಹಿತಿ ನೀಡಿರುವ ಕೋರ್ಟ್, ಪ್ರಕರಣದ ಸೂಕ್ಷ್ಮ ಸ್ವರೂಪದ ಕಾರಣ ಅದನ್ನು ಇನ್ನೂ ಬಹಿರಂಗಪಡಿಸಿಲ್ಲ.
ಮೇಲ್ಮನವಿ ನ್ಯಾಯಾಲಯದಲ್ಲಿ ಗುರುವಾರ ನಾಲ್ಕನೇ ವಿಚಾರಣೆಯಾಗಿತ್ತು. ಹಿಂದಿನ ವಿಚಾರಣೆಗಳು ನವೆಂಬರ್ 23, ನವೆಂಬರ್ 30 ಮತ್ತು ಡಿಸೆಂಬರ್ 7 ರಂದು ನಡೆದವು. ವಿಚಾರಣೆಗಾಗಿ ಕತಾರ್ನಲ್ಲಿರುವ ಭಾರತೀಯ ರಾಯಭಾರಿ ವಿಪುಲ್ ಮತ್ತು ನೌಕಾ ಯೋಧರ ಕುಟುಂಬಗಳು ಗುರುವಾರ ಮೇಲ್ಮನವಿ ವಿಚಾರಣೆ ವೇಳೆ ನ್ಯಾಯಾಲಯದಲ್ಲಿಹಾಜರಾಗಿದ್ದರು. ಕಮಾಂಡರ್ಗಳಾದ ಪೂರ್ಣೇಂದು ತಿವಾರಿ, ಸುಗುಣಾಕರ್ ಪಾಕಲಾ, ಅಮಿತ್ ನಾಗ್ಪಾಲ್, ಸಂಜೀವ್ ಗುಪ್ತಾ ಮತ್ತು ಕ್ಯಾಪ್ಟನ್ಗಳಾದ ನವತೇಜ್ ಸಿಂಗ್ ಗಿಲ್, ಬೀರೇಂದ್ರ ಕುಮಾರ್ ವರ್ಮಾ ಮತ್ತು ಸೌರಭ್ ವಸಿಷ್ಟ್, ನಾವಿಕ ರಾಗೇಶ್ ಗೋಪಕುಮಾ ಎಂಟು ಮಂದಿ ಬಂಧಿತರಾಗಿದ್ದು, ಇವರ ವಿರುದ್ಧದ ಆರೋಪಗಳನ್ನು ಕತಾರ್ ಸರ್ಕಾರ ಇಂದಿಗೂ ಬಹಿರಂಗಗೊಳಿಸಿಲ್ಲ.
ಒಟ್ಟಿನಲ್ಲಿ ಕೇಂದ್ರ ಸರ್ಕಾರದ ನಿರಂತರ ಶ್ರಮದ ಫಲವಾಗಿ ಮಾಜಿ ಯೋಧರ ಮರಣದಂಡನೆ ಶಿಕ್ಷೆ ರದ್ದಾಗಿರುವುದು ಭಾರತಕ್ಕೆ ಸಿಕ್ಕ ಬಹುದೊಡ್ಡ ರಾಜತಾಂತ್ರಿಕ ಗೆಲುವಾಗಿದೆ
ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ