Share this news

ಕಾರ್ಕಳ :ಪ್ರಾಪಂಚಿಕ ಅನುಭವಗಳಾದ ಕಷ್ಟಕಾರ್ಪಣ್ಯಗಳು, ದುಷ್ಟತನಗಳು ನಮ್ಮನ್ನು ಧೃತಿಗೆಡುವಂತೆ ಮಾಡುತ್ತವೆ. ಪವಿತ್ರ ಆತ್ಮರ ಕೃಪೆಯಿಂದ ಅವುಗಳ ಮೇಲೆ ಜಯ ಸಾಧಿಸಿ, ದೇವರಲ್ಲಿ ಅಚಲ ನಂಬಿಕೆಯಿಟ್ಟು ಅವರ ಸಾಕ್ಷಿಗಳಾಗಿ ಬಾಳಿದಾಗ ಮತ್ತು ಒಳಿತನ್ನು ಮಾಡಿದಾಗ ನಾವು ಆಶರ‍್ವಾದವನ್ನು ಪಡೆಯುತ್ತೇವೆ ಎಂದು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಡೊ. ಲೋರೆನ್ಸ್ ಮುಕುಝಿ ಪ್ರಬೋಧನೆ ನೀಡಿದರು.

ಅವರು ಅತ್ತೂರು ಕಾರ್ಕಳ ಸಂತ ಲಾರೆನ್ಸ್ ಬಸಿಲಿಕ ಪುಣ್ಯಕ್ಷೇತ್ರದ ಮಹೋತ್ಸವದ ಮೂರನೇ ದಿನವಾದ ಮಂಗಳವಾರದAದು ಪ್ರಮುಖ ಬಲಿಪೂಜೆಯನ್ನು ನೆರವೇರಿಸಿ ಮಾತನಾಡುತ್ತಿದ್ದರು.


ದಿನದ ಏಕೈಕ ಪ್ರಮುಖ ಬಲಿಪೂಜೆಯನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಡೊ. ಲೋರೆನ್ಸ್ ಮುಕುಝಿಯವರು ಹಾಗೂ ಮಂಗಳೂರು ಧರ್ಮಪ್ರಾಂತ್ಯದ ಶ್ರೇಷ್ಟಗುರು ಮ್ಯಾಕ್ಸಿಮ್ ನೊರೊನ್ಹಾ ಬೆಳಿಗ್ಗೆ 10 ಗಂಟೆಯ ಬಲಿಪೂಜೆಯನ್ನು ಅರ್ಪಿಸಿದರು. ದಿನದ ಇತರ ಬಲಿಪೂಜೆಗಳನ್ನು ವಂದನೀಯ ಆಲ್ವಿನ್ ಸಿಕ್ವೇರಾ ಕಟ್ಕೆರೆ, ವೀರೇಶ್ ಮೋರಸ್ ಶಿವಮೊಗ್ಗ, ತೋಮಸ್ ರೋಶನ್ ಡಿಸೋಜಾ ಗಂಗೊಳ್ಳಿ, ಆ್ಯಂಡ್ರು ಡಿಸೋಜಾ ಬೋಂದೆಲ್ ನೆರವೇರಿಸಿದರು. ವಿಕ್ಟರ್ ಡಿಮೆಲ್ಲೊ, ಪಾನೀರ್ ನೆರವೇರಿಸಿದ ದಿನದ ಅಂತಿಮ ಬಲಿಪೂಜೆಯೊಡನೆ ಮಹೋತ್ಸವದ ಮೂರನೇ ದಿನದ ಕಾರ್ಯಕ್ರಮಗಳು ಸಂಪನ್ನಗೊAಡವು.


ಮಾಜಿ ಶಾಸಕರಾದ ಅಭಯಚಂದ್ರ ಜೈನ್ ಮತ್ತು ವಿನಯ್ ಕುಮಾರ್ ಸೊರಕೆಯವರು ಭೇಟಿ ನೀಡಿ ಸಂತ ಲಾರೆನ್ಸರ ಅನುಗ್ರಹವನ್ನು ಪಡೆದರು.
ಮಹೋತ್ಸವದ ನಾಲ್ಕನೇ ದಿನ ಬುಧವಾರ ಬೆಳಿಗ್ಗೆ 8, 10, 12 ಹಾಗೂ ಮಧ್ಯಾಹ್ನ 2, 4, 6 ಮತ್ತು 8 ಗಂಟೆಗೆ ಬಲಿಪೂಜೆಗಳು ನೆರವೇರಲಿವೆ. ಮಧ್ಯಾಹ್ನ 12 ಗಂಟೆಯ ಬಲಿಪೂಜೆ ಕನ್ನಡ ಭಾಷೆಯಲಿದ್ದು, 10 ಗಂಟೆಯ ವಿಶೇಷ ಸಾಂಭ್ರಮಿಕ ಬಲಿಪೂಜೆಯನ್ನು ಮಂಗಳೂರಿನ ನಿವೃತ್ತ ಧರ್ಮಾಧ್ಯಕ್ಷ ಪರಮಪೂಜ್ಯ ಡೊ| ಅಲೋಶಿಯಸ್ ಪಾವ್ಲ್ ಡಿಸೋಜಾರವರು ನೆರವೇರಿಸಿ ಪ್ರಬೋಧನೆ ನೀಡಲಿದ್ದಾರೆ.

Leave a Reply

Your email address will not be published. Required fields are marked *