Share this news

ಕಾರ್ಕಳ: ಕಾರ್ಕಳದ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ  ಯು ತನ್ನ ಹೆಸರಾಂತ ಆರೋಗ್ಯ ತಜ್ಞರ ಸಮಿತಿಗೆ ಹೊಸ ತಜ್ಞರ ಸೇರ್ಪಡೆಯನ್ನು ಪ್ರಕಟಿಸಿದೆ. ಆಗಸ್ಟ್ 1ರಿಂದ ಪ್ರಸಿದ್ಧ ಸಂತಾನೋತ್ಪತ್ತಿ ಮತ್ತು ಶಸ್ತ್ರಚಿಕಿತ್ಸಕ ಮತ್ತು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಸಂತಾನೋತ್ಪತ್ತಿ ಮತ್ತು ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಪ್ರತಾಪ್ ಕುಮಾರ್ ಎನ್ ಅವರು ಕಾರ್ಕಳದ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ ಸಮಾಲೋಚನೆಗಾಗಿ ಲಭ್ಯವಿರುತ್ತಾರೆ. ಪ್ರತಿ ಮಂಗಳವಾರ ಅಪರಾಹ್ನ 2 ಗಂಟೆಯಿAದ 4.40 ರವರೆಗೆ ಅಪಾಯಿಂಟ್‌ಮೆAಟ್ ಆಧಾರದ ಮೇಲೆ ಸಮಾಲೋಚನೆಗಳಿಗೆ ಲಭ್ಯವಿರುತ್ತಾರೆ ಎಂದು ಕಾರ್ಕಳ ಡಾ.ಟಿ.ಎಂ.ಎ ಪೈ ರೋಟರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಕೀತೀನಾಥ್ ಬಲ್ಲಾಳ್ ತಿಳಿಸಿದ್ದಾರೆ.

ಸಂತಾನೋತ್ಪತ್ತಿ ಮತ್ತು ಶಸ್ತ್ರಚಿಕಿತ್ಸಾ ಸೇವೆಗಳ ಈ ಸೇರ್ಪಡೆಯು ಆಸ್ಪತ್ರೆಗೆ ಮಹತ್ವದ ಮೈಲಿಗಲ್ಲಾಗಿದೆ. ಇದು ಈಗಿರುವ ಸಾಮಾನ್ಯ ವೈದ್ಯಕೀಯ, ಸಾಮಾನ್ಯ ಮತ್ತು ಲ್ಯಾಪರೊಸ್ಕೋಪಿಕ್ ಶತ್ರಚಿಕಿತ್ಸೆ , ಮಕ್ಕಳ ವಿಭಾಗ, ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗ, ಮೂಳೆ ಮತ್ತು ಕೀಲು ಶಸ್ತ್ರಚಿಕಿತ್ಸೆ, ನೇತ್ರಚಿಕಿತ್ಸೆ , ಹ್ರದ್ರೋಗ , ಕಿವಿ ಮೂಗು ಗಂಟಲು, ನರವಿಜ್ಞಾನ (ನ್ಯೂರೊಲಜಿ), ಮೂತ್ರಪಿಂಡ (ನೆಫ್ರಾಲಜಿ), ಮೂತ್ರಶಾಸ್ತ್ರ (ಯುರೊಲೊಜಿ), ಉಪಶಾಮಕ ಔಷಧ , ಮಕ್ಕಳ ರಕ್ತಶಾಸ್ತ್ರ & ಕ್ಯಾನ್ಸರ್, ಶಸ್ತ್ರಚಿತ್ಸಾ ಕ್ಯಾನ್ಸರ್ , ಚರ್ಮ, ಮಾನಸಿಕ ಆರೋಗ್ಯ , ರೇಡಿಯೋಲೋಜಿ ಮತ್ತು ಪ್ಯಾಥೋಲಾಜಿ (ಅತ್ಯಾಧುನಿಕ ತಂತ್ರಜ್ಞಾನದ ಲ್ಯಾಬ್ ಪರೀಕ್ಷಾ) ಸೇವೆಗಳಿಗೆ ಪೂರಕವಾಗಿದೆ.

ನಮ್ಮ ಆರೋಗ್ಯ ವೃತ್ತಿಪರರ ತಂಡಕ್ಕೆ ಡಾ. ಪ್ರತಾಪಕುಮಾರ್ ಎನ್ ಅವರನ್ನು ಸ್ವಾಗತಿಸಲು ನಾವು ಸಂತೋಷಪಡುತ್ತೇವೆ. ಈ ಸಂತಾನೋತ್ಪತ್ತಿ ಮತ್ತು ಶಸ್ತ್ರಚಿಕಿತ್ಸಾ ಸೇವೆಗಳ ಸೇರ್ಪಡೆಯು, ಸಕಾಲದಲ್ಲಿ ರೋಗನಿರ್ಣಯಮಾಡಿ ನಮ್ಮ ಗುಣಮಟ್ಟದ ವೈದ್ಯಕೀಯ ಆರೈಕೆ ಮೂಲಕ ಸಮುದಾಯಕ್ಕೆ ನೀಡಲು ಇನ್ನಷ್ಟು ಸಹಕಾರಿಯಾಗಲಿದೆ ಎಂದು ಹೇಳಿದರು.

ಅಪಾಯಿಂಟ್‌ಮೆAಟ್ ನಿಗದಿಪಡಿಸಲು ಅಥವಾ ಹೆಚ್ಚಿನ ಮಾಹಿತಿಗಾಗಿ, ದೂರವಾಣಿ ಸಂಖ್ಯೆ 9731601150 ಅಥವಾ 08258 230583 ಅನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *