ಕಾರ್ಕಳ: ಮಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದ ತೆಲಂಗಾಣದ ಶಾಸಕ ಪಂಜಿಗುಳ ರೋಹಿತ್ ರೆಡ್ಡಿ ಪ್ರಯಾಣಿಸುತ್ತಿದ್ದ ಕಾರಿನ ಟಯರ್ ಸ್ಪೋಟಗೊಂಡು ಅಪಘಾತಕ್ಕೊಳಗಾದ ಘಟನೆ ಮಿಯ್ಯಾರು ಸೇತುವೆ ಬಳಿಯ ಮುಡಾರು- ನಲ್ಲೂರು ಕ್ರಾಸ್ ಬಳಿ ಸಂಭವಿಸಿದೆ.
ವೇಗವಾಗಿ ಸಾಗುತ್ತಿದ್ದ ಕಾರಿನ ಟಯರ್ ಏಕಾಏಕಿ ಸ್ಟೋಟಗೊಂಡಿದ್ದು ಚಾಲಕನ ಸಮಯ ಪ್ರಜ್ಣೆಯಿಂದಾಗಿ ವಾಹನದಲ್ಲಿ ಇದ್ದ ಶಾಸಕರಿಗೆ ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ. ಅಪಘಾತಕ್ಕೀಡಾದ ಕಾರು ರಸ್ತೆ ಬದಿಯ ವಿದ್ಯುತ್ ಕಂಬ ಹಾಗೂ ಮರದ ಮಧ್ಯೆ ಹೋಗಿ ನಿಂತಿದೆ.
ಬಳಿಕ ಶಾಸಕರು ಕಾರ್ಕಳ ಪೊಲೀಸರ ಸಹಕಾರದೊಂದಿಗೆ ಶೃಂಗೇರಿ ಕಡೆಗೆ ಪ್ರಯಾಣ ಬೆಳೆಸಿದ್ದಾರೆ.