Share this news

ಹಿರ್ಗಾನ: ಬೈಕುಗಳೆರಡು ಡಿಕ್ಕಿ: ಸವಾರನಿಗೆ ಗಾಯ

ಕಾರ್ಕಳ: ಎದುರುಗಡೆಯಿಂದ ಬೈಕಿನಲ್ಲಿ ಹೋಗುತ್ತಿದ್ದ ಸವಾರನೋರ್ವ ಯಾವುದೇ ಮುನ್ಚೂಚನೇ ನೀಡದೇ ಹಠಾತ್ತಾಗಿ ಬೈಕನ್ನು ಆತನ ಬಲಬದಿಗೆ ತಿರುಗಿಸಿದಾಗ ಹಿಂದಿನಿAದ ಬರುತ್ತಿದ್ದ ಬೈಕ್ ಡಿಕ್ಕಿಯಾಗಿ ಸವಾರ ಬಿದ್ದು ಗಾಯಗೊಂಡಿರುವ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಮುರೂರು ಎಂಬಲ್ಲಿ ಬುಧವಾರ ರಾತ್ರಿ ಸಂಭವಿಸಿದೆ.
ಕುAದಾಪುರ ಹೊಸಂಗಡಿ ನಿವಾಸಿ ಸುರೇಶ್ (35) ಎಂಬವರು ಗಾಯಗೊಂಡಿದ್ದಾರೆ. ಅವರು ಬುಧವಾರ ರಾತ್ರಿ 7.30ರ ಸುಮಾರಿಗೆ ಕಾರ್ಕಳ ಕಡೆಯಿಂದ ಹೆಬ್ರಿ ಮಾರ್ಗವಾಗಿ ಕುಂದಾಪುರ ಕಡೆಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಗಾಯಗೊಂಡ ಅವರನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿಕ ಬಳಿಕ ಹೆಚ್ಚಿನ ಚಿಕಿತ್ಸೆಗೆ ಉಡುಪಿ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಕಾರ್ಕಳ; ಬೈಕಿಗೆ ಟ್ರಾಕ್ಟರ್ ಡಿಕ್ಕಿ: ಇಬ್ಬರಿಗೆ ಗಾಯ

ಕಾರ್ಕಳ: ಬೈಕಿಗೆ ಟ್ರಾಕ್ಟರ್ ಡಿಕ್ಕಿಯಾಗಿ ಬೈಕ್ ಸವಾರ ಹಾಗೂ ಸಹಸವಾರೆ ಗಾಯಗೊಂಡಿರುವ ಘಟನೆ ಗುರುವಾರ ಕಾರ್ಕಳ ತೆಳ್ಳಾರು ರಸ್ತೆಯ ರಾಘವೇಂದ್ರ ಮಠದ ಬಳಿ ಸಂಭವಿಸಿದೆ.
ಕಾರ್ಕಳ ಕಡೆಯಿಂದ ತೆಳ್ಳಾರು ಕಡೆಗೆ ಚಾಲಕ ಟ್ರಾಕ್ಟರನ್ನು ಅತೀವೇಗವಾಗಿ ಚಲಾಯಿಸಿ ತೆಳ್ಳಾರು ಕಡೆಯಿಂದ ಕಾರ್ಕಳಕ್ಕೆ ಬರುತ್ತಿದ್ದ ಬೈಕಿಗೆ ಡಿಕ್ಕಿಯಾಗಿದೆ. ಈ ಅಪಘಾತದಿಂದ ಬೈಕ್ ಸವಾರ ಹರೀಶ್ ಅವರ ತಲೆಗೆ ಹಾಗೂ ಹಿಂಬದಿ ಸವಾರೆ ಸಹನಾ ಕೈ ಕಾಲಿಗೆ ಎಂಬವರಿಗೆ ಗಂಭೀರ ಗಾಯಗಳಾಗಿವೆ. ಟ್ರಾಕ್ಟರ್ ಚಾಲಕನ ನಿರ್ಲಕ್ಷö್ಯತನದಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ  ಲಿಂಕ್ ಕ್ಲಿಕ್ ಮಾಡಿ

ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ  ಲಿಂಕ್ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *