Share this news

ಕಾರ್ಕಳ: ಇಂದಿನ ಕಾಲದಲ್ಲೂ ಮತವನ್ನು ಮಾರಿಕೊಳ್ಳುವ ಪ್ರವೃತ್ತಿ ಇದೆಯೆಂದರೆ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಭಾರತಕ್ಕೆ ನಾಚಿಗೆಯ ವಿಚಾರ. ಅದಕ್ಕೆ ಇಂದಿನ ಯುವಜನತೆ ಯಾವತ್ತೂ ಆಸ್ಪದ ಕೊಡಬಾರದು. ಮೊದಲ ಮುಖ್ಯ ಚುನಾವಣಾಧಿಕಾರಿ ಶೇಷನ್ ಅವರು ಮಾಡಿದ ಸುಧಾರಣೆಯನ್ನು ಇಂದಿನ ಯುವ ಜನತೆ ಉಳಿಸಿ ಬೆಳೆಸಬೇಕಿದೆ. ಯುವಜನತೆ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡು  ಅತ್ಯುತ್ತಮ ವ್ಯಕ್ತಿಗಳನ್ನು ಆರಿಸಬೇಕು. ನಿರ್ಲಕ್ಷ್ಯ  ವಹಿಸಿದರೆ ಪ್ರಜಾಪ್ರಭುತ್ವ ವ್ಯವಸ್ಥೆ ಕುಸಿಯುತ್ತದೆ. ಮತದಾನದಲ್ಲಿ ವಿದ್ಯಾವಂತರ ಪಾಲ್ಗೊಳ್ಳುವಿಕೆ ಅತೀ ಅಗತ್ಯ ಎಂದು ಉಡುಪಿ ಅಜ್ಜರಕಾಡು ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತç ವಿಭಾಗದ ಸಹಾಯಕ ಪ್ರಾಧ್ಯಾಪಕ ಎನ್. ನಿತ್ಯಾನಂದ ಅವರು ಹೇಳಿದರು.


ಅವರು ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ಮತದಾರರ ಸಾಕ್ಷರತಾ ಕ್ಲಬ್‌ನ ವತಿಯಿಂದ ನಡೆದ  ರಾಷ್ಟ್ರೀಯ ಮತದಾನ ದಿನಾಚರಣೆಯ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಚಾರ್ಯ ಡಾ. ಮಂಜುನಾಥ್ ಎ. ಕೋಟ್ಯಾನ್ ಅವರು ಮಾತನಾಡಿ, ಯುವ ಮತದಾರರಿಂದ ದೇಶದ ಸಾಮಾಜಿಕ ಸ್ಥಿತಿಯನ್ನು ಬದಲಿಸಬಹುದು. ಪ್ರಾಮಾಣಿಕವಾಗಿ ಆತ್ಮಸಾಕ್ಷಿಗೆ ಸರಿಯಾಗಿ ಬದುಕು ಮತ್ತು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು,ಆಮಿಷಗಳಿಗೆ ಬಲಿಯಾಗಬಾರದು ಎಂದು ಹೇಳಿದರು.


ಸಮಾರಂಭದಲ್ಲಿ ಮತದಾರರ ಸಾಕ್ಷರತಾ ಕ್ಲಬ್ ನ ಸಂಯೋಜಕಿ ಸುಮಾಲಿನಿ ಜೈನ್ ಹಾಗೂ ಕಾರ್ಯದರ್ಶಿ ವಿಜಯಲಕ್ಷಿö್ಮ, ತೃತೀಯ ಬಿ.ಎ. ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *