ಕಾರ್ಕಳ :ಕ್ರೀಡೆಯಲ್ಲಿ ಸೋತರೆ ಅದು ಮುಂದಿನ ಪ್ರಯತ್ನಕ್ಕೆ ನಾಂದಿಯಾಗಬಲ್ಲದು, ಗೆಲುವಾದರೆ ಮುಂದಿನ ಯಶಸ್ಸಿನ ಮೆಟ್ಟಿಲಾಗುತ್ತದೆ. ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ, ಕ್ರೀಡೆಯನ್ನು ಕೇವಲ ಆಟೋಟ ಚಟುವಟಿಕೆ ಎಂದು ಭಾವಿಸದೇ ಅದರಿಂದ ಮನಸ್ಸು ಮತ್ತು ದೇಹಾರೋಗ್ಯಕ್ಕೆ ಬಹಳಷ್ಟು ಪ್ರಯೋಜನವಿದೆ. ಆದ್ದರಿಂದ ವಿದ್ಯಾರ್ಥಿಗಳೆಲ್ಲರೂ ಕ್ರೀಡಾ ಮನೋಭಾವದಲ್ಲಿ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರ ಜತೆಗೆ ದೈಹಿಕ ಸದೃಢತೆಗೂ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕೆಂದು ಅಂತರಾಷ್ಟ್ರೀಯ ಕ್ರೀಡಾಪಟು , ಏಕಲವ್ಯ ಪ್ರಶಸ್ತಿ ಪುರಸ್ಕೃತೆ ಅಕ್ಷತಾ ಪೂಜಾರಿ ಅವರು ಹೇಳಿದರು.
ಅವರು ಭುವನೇಂದ್ರ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಡಾ. ಮಂಜುನಾಥ್ ಎ. ಕೋಟ್ಯಾನ್ ವಹಿಸಿ ವಿದ್ಯಾರ್ಥಿಗಳಲ್ಲಿ ಕ್ರೀಡಾಸ್ಪೂರ್ತಿಯೆಂಬ ತಿಳುವಳಿಕೆ ಮೂಡಬೇಕಾದರೆ ಕ್ರೀಡಾ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಬೇಕು ಎಂದರು. Áಲೇಜಿನ ಆಡಳಿತಮಂಡಳಿ ಸದಸ್ಯ ಎರ್ಮಾಳ್ ಮೋಹನ್ ಶೆಣೈಯವರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಕ್ಷೇಮಪಾಲನಾಧಿಕಾರಿ ಪ್ರೊ ದತ್ತಾತ್ರೇಯ ಮಾರ್ಪಳ್ಳಿ, ಐಕ್ಯೂಎಸಿ ಸಂಯೋಜಕ ಪ್ರೊ.ನಾಗಭೂಷಣ್, ಹಿರಿಯ ಪ್ರಾಧ್ಯಾಪಕ ಡಾ. ಅರುಣಕುಮಾರ್ ಎಸ್. ಆರ್ ಮತ್ತಿತರ ಪ್ರಾಧ್ಯಾಪಕ ಬಂಧುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಭುವನೇಂದ್ರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ರಮೇಶ್ ಎಸ್.ಸಿ. ಸ್ವಾಗತಿಸಿದರು. ದೈಹಿಕ ನಿರ್ದೇಶಕ ನವೀನಚಂದ್ರ ವಂದಿಸಿದರು. ವಿದ್ಯಾರ್ಥಿ ಗಣೇಶ್ ಕಾರ್ಯಕ್ರಮ ನಿರೂಪಿಸಿದರು