Share this news

ವಿಜಯಪುರ: ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಕಾರ್ಕಳ ಕ್ಷೇತ್ರದಿಂದಲೇ ಕಣಕ್ಕಿಳಿಯುವುದಾಗಿ ಘೋಷಣೆ ಮಾಡಿದ್ದು, ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸದಂತೆ ಶ್ರೀರಾಮ ಸೇನೆ ಒತ್ತಾಯಿಸಿದೆ.

ಆದರೆ ಇದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ನೇರವಾಗಿ ಟಾಂಗ್ ಕೊಟ್ಟಿದ್ದು, ಅವರು ಮನವಿ ಮಾಡಿದ್ದಾರೆ, ಮಾಡಲಿ. ನಮ್ಮದು ರಾಷ್ಟ್ರೀಯ ಪಕ್ಷ. ಹೀಗಾಗಿ 224 ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳನ್ನು ಹಾಕುತ್ತೇವೆ. ಉಡುಪಿ ಜಿಲ್ಲೆಯ ಕಾರ್ಕಳ ಕ್ಷೇತ್ರದಲ್ಲಿ ಸುನಿಲ್ ಕುಮಾರ್ ಮೂರು ಬಾರಿ ಗೆದ್ದು ಸಚಿವರಾಗಿದ್ದಾರೆ. ಅದು ಅವರದ್ದೇ ಕ್ಷೇತ್ರ ಅಲ್ಲಿ ಬೇರೆಯವರಿಗೆ ಅವಕಾಶವಿಲ್ಲ ಎಂದಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಅವರು, ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸುನಿಲ್ ಕುಮಾರ್ ಕಾರ್ಕಳ ಕ್ಷೇತ್ರದಿಂದಲೇ ಕಣಕ್ಕಿಳಿಯುವ ಸುಳಿವು ನೀಡಿದ್ದು, ಈ ಬಾರಿ ಕಾರ್ಕಳ ತಾಲೂಕಿನ ಹಿಂದೂ ಮತದಾರರಿಗೆ ಎರಡು ಹಿಂದುತ್ವದ ಮುಖಗಳು ಕಾಣಿಸಿಕೊಳ್ಳಲಿವೆ.

Leave a Reply

Your email address will not be published. Required fields are marked *