Share this news

ಕಾರ್ಕಳ :ಕಾರ್ಕಳ ತಾಲೂಕು ಹೂವಿನ ಬೆಳೆಗಾರರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯ ಕಾರ್ಕಳ ಪ್ರಕಾಶ್ ಹೊಟೇಲ್ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.

ಹೂವು ಬೆಳೆಗಾರರ ಸಹಕಾರಿ ಸಂಘದ ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಜ್ಯದಲ್ಲಿ ಹೊಸ ಕಲ್ಪನೆಯಾಗಿರುವ ಹೂವಿನಬೆಳೆಗಾರರ ಸಹಕಾರ ಸಂಘವು ಹೂವಿನ ಬೆಳೆಗಾರರ ಸಂಕಷ್ಟಗಳನ್ನು ಸರ್ಕಾರದ ಗಮನ ಸೆಳೆದು ಸಿಗುವ ಸೌಲಭ್ಯಗಳನ್ನು ಬೆಳೆಗಾರರಿಗೆ ತಲುಪಿಸುವಲ್ಲಿ ಶ್ರಮಿಸುತ್ತಿದೆ, ಸಹಕಾರ, ಸೇವೆಯ ಮೂಲಕ ಪ್ರಸಿದ್ಧಿ ಪಡೆದು ಉಡುಪಿ ಜಿಲ್ಲಾ ಮಟ್ಟದ ಮಾನ್ಯತೆ ಪಡೆದು ಕಾರ್ಕಳದಲ್ಲಿ ಕೇಂದ್ರ ಕಚೇರಿಯ ಜೊತೆಗೆ ಹಣಕಾಸು ವ್ಯವಹಾರ ನಡೆಸುತ್ತಿದೆ, ಹೆಬ್ರಿಯಲ್ಲೂ ಶಾಖೆಯನ್ನು ಹೊಂದಿದೆ. ಗ್ರಾಹಕರ ಅನುಕೂಲಕ್ಕಾಗಿ ಶಾಖೆಯನ್ನು ಸಂಪೂರ್ಣ ಗಣಕೀಕರಣಗೊಳಿಸಲಾಗಿದೆ ಎಂದರು.
ಹೂವಿನ ಬೆಳೆಗಾರರಿಗೆ ಸಂಘವು ಸಕಾಲದಲ್ಲಿ ಹೂವಿನ ಗಿಡ ನಾಟಿಕ್ರಮ, ಆರೈಕೆ, ಕಾಯಿಲೆ, ಮದ್ದು, ವ್ಯಾಪಾರ ವ್ಯವಹಾರದ ಸಮಗ್ರ ಮಾಹಿತಿಯನ್ನು ಲಭ್ಯ ಮಾಧ್ಯಮಗಳ ಮೂಲಕ ಕಾಲ ಕಾಲಕ್ಕೆ ನೀಡುತ್ತಿದೆ, ನಮ್ಮ ಸಹಕಾರ ಸಂಘವು ಹೂವಿನ ಬೆಳೆಗಾರರ ಮತ್ತು ಸರ್ಕಾರದ ನಡುವೆ ಕೊಂಡಿಯಾಗಿ ಸರಕಾರದಿಂದ ಕಾಲಕಾಲಕ್ಕೆ ಸಿಗುವ ಸವಲತ್ತುಗಳನ್ನು ಬೆಳೆಗಾರರಿಗೆ ದೊರಕಿಸಿ ಕೊಡಲು ಶ್ರಮಿಸುತ್ತಿದೆ. ಸಂಘವು ಎಲ್ಲಾ ವರ್ಗದ ಜನ ಸಾಮಾನ್ಯರಿಗಾಗಿ ಬ್ಯಾಂಕಿಂಗ್ ವ್ಯವಹಾರವನ್ನು ನಡೆಸುತ್ತಿದೆ. ತಾವು ಸಂಘವನ್ನು ಬೆಳೆಸಿ ಮುನ್ನಡೆಸಬೇಕು ಎಂದು ಅಧ್ಯಕ್ಷ ಫ್ರಾನ್ಸಿಸ್ ಡಿಸೋಜಾ ಮನವಿ ಮಾಡಿದರು.
ಸಂಘವು ಸದಸ್ಯರ ನಡುವೆ ಸಮನ್ವಯತೆ ಪರಸ್ಪರ ಸ್ವಸಹಾಯ ಮತ್ತು ಸಹಕಾರದ ಮನೋಭಾವವನ್ನು ಉತ್ತೇಜಿಸಲು ಹಾಗೂ ನಿಯಮಿತ ಉಳಿತಾಯವನ್ನು ಶಕ್ತಿ ಹೆಸರಿನ ಸ್ವಸಹಾಯ ಸಂಘವನ್ನು ರಚಿಸಿದ್ದು 27 ಸ್ವಸಹಾಯ ಸಂಘಗಳು ಕಾರ್ಯ ನಿರ್ವಹಿಸುತ್ತಿದ್ದು ಎಲ್ಲಾ ಸಾಲ ಸೌಲಭ್ಯಗಳನ್ನು ನೀಡಲಾಗಿದೆ. ಸಂಘದಲ್ಲಿ ಇ ಸ್ಟಾಂಪಿಂಗ್, ಪಾನ್ ಕಾರ್ಡ್,ಮಲ್ಲಿಗೆ ಗಿಡ ಸಹಿತ ವಿವಿಧ ಸೌಲಭ್ಯಗಳು ಕೂಡ ದೊರೆಯುತ್ತಿದೆ ಎಂದು ಫ್ರಾನ್ಸಿಸ್ ಡಿಸೋಜಾ ತಿಳಿಸಿದರು.
ಹೂವಿನ ಬೆಳೆಗಾರರ ಸಹಕಾರಿ ಸಂಘದ ನಿರ್ದೇಶಕರಾದ ಬಿ. ಶಶಿಕಾಂತ್ ಭಟ್, ಜಾನ್ ಟೆಲ್ಲಿಸ್ ಅಜೆಕಾರು, ವೆಂಕಟರಮಣ ಶರ್ಮಾ, ಫ್ಲೋರಾ ಮಂಡೋನ್ಸಾ, ಉದಯ್ ವಿ.ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
ಸಂಘದ ಕಾರ್ಯದರ್ಶಿ ಲತಾ ವಾರ್ಷಿಕ ವರದಿ ಮಂಡಿಸಿದರು. ವೀಣಾ ಸ್ವಾಗತಿಸಿದರು. ಸಿಬ್ಬಂದಿ ವರ್ಗದವರು ಸಹಕರಿಸಿದರು.
ವಿಯೋಲ್ಲ ರೊಸಾರಿಯೋ ಕಾರ್ಯಕ್ರಮ ನಿರೂಪಿಸಿದರು.

 

 

 

 

 

 

 

 

 

Leave a Reply

Your email address will not be published. Required fields are marked *