Share this news

ಕಾರ್ಕಳ: ಜಿಲ್ಲಾಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ಕುಕ್ಕುಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂವಿಧಾನಜಾಗೃತಿ ಜಾಥಾ ಕಾರ್ಯಕ್ರಮ ಫೆ‌14ರಂದು ನಡೆಯಿತು.
ಈ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಜಯಂತಿನಗರ, ಸರಕಾರಿ ಪ್ರೌಢಶಾಲೆ ನಕ್ರೆ, ಕುಕ್ಕುಂದೂರು, ಮತ್ತು ಕೆಎಂಇಎಸ್ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಗಳು, ಪಥ ಸಂಚಲನ ಹಾಗೂ ಬಲೂನ್ ಹಾರಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ದಲಿತ ಸಮುದಾಯದ ಮುಖಂಡ ಅಣ್ಣಪ್ಪ ನಕ್ರೆ, ಸಂಘಟನಾ ಸಂಚಾಲಕರು ಸಂವಿಧಾನದ ಜಾಗೃತಿ ಜಾಥಾಕ್ಕೆ ಶುಭ ಹಾರೈಸಿದರು. ಸಮಾಜ ಕಲ್ಯಾಣ ಇಲಾಖಾ ಸಿಬ್ಬಂದಿ ಜಯಂತಿ ಜೆ. ರವರು ಸಂವಿಧಾನ ಪೀಠಿಕೆಯನ್ನು ಭೋಧಿಸಿದರು. ಕಾರ್ಯಕ್ರಮದ ನಿರೂಪಕರಾದ ಕುಕ್ಕುಂದೂರು ಗ್ರಾಮ ಪಂಚಾಯತ್ ಕಾರ್ಯದರ್ಶಿ ಶ್ರೀಮತಿ ನಿರ್ಮಲ ರವರು ಹಾಜರಿದ್ದ ಎಲ್ಲರನ್ನೂ ಸ್ವಾಗತಿಸಿದರು. ಸಂವಿಧಾನ ಕುರಿತಾದ ವಿವಿಧ ಸ್ಪರ್ದೆಯನ್ನು ಶಾಲಾ ಮಕ್ಕಳಿಗೆ ಗ್ರಾಮ ಪಂಚಾಯತ್ ವತಿಯಿಂದ ನಡೆಸಲಾಗಿದ್ದು ವಿಜೇತರಿಗೆ ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು.

ಕಾಯಕ್ರಮದಲ್ಲಿ ಕಾರ್ಕಳ ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಶ್ರೀನಿವಾಸ ಬಿ.ವಿ, ಕಾರ್ಕಳ ಮತ್ತು ಪಂಚಾಯತ್ ಅಧ್ಯಕ್ಷೆ ಉಷಾ ಕೆ. ಉಪಾಧ್ಯಕ್ಷರು. ಗ್ರಾಮ ಪಂಚಾಯತ್ ಸದಸ್ಯರು. ಕಂದಾಯ ಇಲಾಖೆ ಉಪ ತಹಶೀಲ್ದಾರ್ ಮಂಜುನಾಥ ನಾಯಕ್ ಹಾಗೂ ಸಿಬ್ಬಂದಿ ವರ್ಗದವರು, ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿ ವರ್ಗದವರು, ಅಂಗನವಾಡಿ ಕಾರ್ಯಕರ್ತೆಯವರು, ಶಾಲಾ ಮುಖ್ಯೋಪಾಧ್ಯಾಯರು, ಸಂಘಟನೆಕಾರರು. ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ
ಪ್ರದೀಪ್ ಕುಮಾರ್ ಶೆಟ್ಟಿ ವಂದಿಸಿದರು.

 

Leave a Reply

Your email address will not be published. Required fields are marked *