Share this news

ಅಜೆಕಾರು: ಕಾರ್ಕಳ ತಾಲೂಕಿನ ಕುಕ್ಕುಜೆ ಗ್ರಾಮದ ಸುಳಿಗುಂಡಿ ಎಂಬಲ್ಲಿ ಹೊಳೆಯ ದಡದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿರುವ 2 ಯೂನಿಟ್ ಮರಳನ್ನು ಅಜೆಕಾರು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪೊಲೀಸರ ದಾಳಿ ವೇಳೆ ಓರ್ವ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಈ ಭಾಗದಲ್ಲಿ ಮರಳು ದಂಗೆಕೋರರು ಯಾವುದೇ ಪರವಾನಗಿ ಇಲ್ಲದೇ ಅಕ್ರಮವಾಗಿ ಹೊಳೆಯಿಂದ ಮರಳು ತೆಗೆದು ಮಾರಾಟ ಮಾಡುವ ಕುರಿತು ದೂರುಗಳು ಬಂದ ಹಿನ್ನೆಲೆಯಲ್ಲಿ ಪೊಲೀಸರು ಈ ದಾಳಿ ನಡೆಸಿದ್ದಾರೆ.
ದಾಳಿ ಸಂದರ್ಭದಲ್ಲಿ ಮರಳುಗಾರಿಕೆಗೆ ಬಳಸಲಾಗಿದ್ದ ಹಾರೆ,ಪ್ಲಾಸ್ಟಿಕ್ ಬುಟ್ಟಿಗಳು ಹಾಗೂ ಕಬ್ಬಿಣದ ಬಕೆಟ್ ಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ  ಲಿಂಕ್ ಕ್ಲಿಕ್ ಮಾಡಿ

 

 

 

 
 

 

 
 

 

 
 

 

 
 

Leave a Reply

Your email address will not be published. Required fields are marked *