ಮೈಸೂರು: ಶಕ್ತಿ ಯೋಜನೆ ಜಾರಿಯಿಂದ ಖಾಸಗಿ ಬಸ್ಸುಗಳಿಗೆ ಆಗಿರುವ ನಷ್ಟವನ್ನು ಸರ್ಕಾರ ಭರಿಸಬೇಕೆನ್ನುವ ಬೇಡಿಕೆಯನ್ನು ಸಿಎಂ ಸಿದ್ದರಾಮಯ್ಯ ತಳ್ಳಿಹಾಕಿದ್ದಾರೆ.
ಬಂದ್ ಕುರಿತು ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳೆಯರಿಗೆ ಅನುಕೂಲವಾಗಲಿ ಎಂದು ‘ಶಕ್ತಿ’ ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರಿಂದ ಖಾಸಗಿ ಬಸ್ ನವರು ನಷ್ಟ ಎನ್ನುತ್ತಿದ್ದಾರೆ.
ಆ ನಷ್ಟವನ್ನು ತುಂಬಿಕೊಡಿ ಎಂಬ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿದ್ದಾರೆ. ಖಾಸಗಿಯವರಿಗೆ ಆಗುವ ನಷ್ಟ ತುಂಬಿಕೊಡಲು ಆಗಲ್ಲ. ಅಸಾಧ್ಯವಾದ ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ ಎಂದಿದ್ದಾರೆ.ಖಾಸಗಿ ಬಸ್ಸು, ಕ್ಯಾಬ್ ಮಾಲಕರ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಅಸಾಧ್ಯವೆಂದ ಸಿಎಂ ಬಸ್ ಮಾಲಕರ ನಷ್ಟ ಭರಿಸುವ ಬೇಡಿಕೆಯನ್ನು ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ.ಪ್ರತಿಭಟನೆ ಮಾಡಲು ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಹಕ್ಕಿದೆ. ಆದರೆ, ಯಾವುದೇ ತೊಂದರೆಯಾಗದೆ ಶಾಂತಯುತವಾಗಿ ಪ್ರತಿಭಟನೆ ಮಾಡಲಿ ಎಂದು ಸಿಎಂ ಹೇಳಿದರು
ಶಕ್ತಿ ಯೋಜನೆಯನ್ನು ಖಾಸಗಿ ಬಸ್ ಗಳಿಗೂ ವಿಸ್ತರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಸಾರಿಗೆ ಒಕ್ಕೂಟದಿಂದ ಇಂದು ಬೆಂಗಳೂರು ಬಂದ್ ಗೆ ಕರೆ ನೀಡಲಾಗಿತ್ತು.ಆಟೋ, ಕ್ಯಾಬ್, ಸೇರಿದಂತೆ ಸಾವಿರಾರು ಖಾಸಗಿ ವಾಹನಗಳು ರಸ್ತೆಗೆ ಇಳಿದಿಲ್ಲ. ಇದರಿಂದಾಗಿ ಕೆಲವೆಡೆ ಪ್ರಯಾಣಿಕರು ಪರದಾಡುವಂತಾಯಿತು.