ಮಂಗಳೂರು: ಚಾರ್ಮಾಡಿ ಘಾಟಿಯ 34 ಕಡೆಗಳಲ್ಲಿ ಭೂಕುಸಿತದ ಭೀತಿಯಿದೆ, ಪ್ರವಾಹ ಸಾಧ್ಯತೆಯ 63 ಜಾಗಗಳು ಮತ್ತು ರಸ್ತೆಗಳು ಸೇರಿದಂತೆ ಭೂ ಕುಸಿತ ಸಾಧ್ಯತೆಯ 87 ಜಾಗಗಳನ್ನು ಗುರುತಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದ್ದಾರೆ.
ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ, ಪ್ರಾಕೃತಿಕ ವಿಕೋಪ ವಿಚಾರವಾಗಿ ಜಿಲ್ಲಾಡಳಿತ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕುಕ್ಕೆ ಸುಬ್ರಹ್ಮಣ್ಯ ಕೇತ್ರಕ್ಕೆ ಬರಲು ಸದ್ಯ ದಾರಿಯಿದ್ದು, ಇದರಲ್ಲಿ ಎರಡು ದಾರಿ ಬಂದ್ ಆಗಿದೆ. ಹೀಗಾಗಿ ಆದಷ್ಟು ಕುಕ್ಕೆ ಸುಬ್ರಹ್ಮಣ್ಯ ಪ್ರವಾಸವನ್ನು ಮುಂದೂಡಿ. ಹೊರಗಿನ ಪ್ರವಾಸಿಗರು ಅಪಾಯಕಾರಿ ಜಲಪಾತ, ನೀರಿಗೆ ಇಳಿಯುವಂತ್ತಿಲ್ಲ. ದೇವಸ್ಥಾನ ಭೇಟಿಗೆ ಬಂದವರು ದೇವರ ದರ್ಶನ ಅಷ್ಟೇ ಮಾಡಿ. ರೆಡ್ ಅಲರ್ಟ್ ಇರುವ ಈ ರಸ್ತೆಗಳಲ್ಲಿ ಪ್ರಯಾಣ ಸೂಕ್ತವಲ್ಲ. ಯಾವುದೇ ರಸ್ತೆ ಬಿರುಕು ಬಿಟ್ಟಲ್ಲಿ 112 ನಂಬರ್ಗೆ ಮಾಹಿತಿ ನೀಡಿ ಎಂದು ಹೇಳಿದ್ದಾರೆ.
ಈ ಬಾರಿಯ ಮಳೆಗೆ ಜಿಲ್ಲೆಯಲ್ಲಿ ಏಳು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಿಎಂ ಸಿದ್ಧರಾಮಯ್ಯ ಅವರು ಹಲವಾರು ನಿರ್ದೇಶನ ನೀಡಿದ್ದಾರೆ. ಸಾವು ಸಂಭವಿಸದAತೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದ್ದಾರೆ. ಈ ಬಾರಿ ಪ್ರತೀ ಗ್ರಾಮ ಪಂಚಾಯತಿ ನಗರಸಭೆ, ಪಾಲಿಕೆ ಸೇರಿ 296 ಪ್ರಾಕೃತಿಕ ವಿಕೋಪ ನಿಯಂತ್ರಣ ತಂಡ ಮಾಡಿದ್ದೇವೆ. ಇದಕ್ಕೆ ಸಂಬAಧಿಸಿದ ಅನುದಾನ, ಅಧಿಕಾರ ಎಲ್ಲವನ್ನೂ ಅವರಿಗೆ ಕೊಡಲಾಗಿದೆ. ಎಲ್ಲವನ್ನೂ ಡಿಸಿ ಕಚೇರಿ ಮೂಲಕ ನಿಯಂತ್ರಣ ಮಾಡಲಾಗುತ್ತೆ ಎಂದರು.
ಸ್ಥಳೀಯ ಮಟ್ಟದಲ್ಲಿ ಮೊದಲ ರೆಸ್ಪಾನ್ಸ್ ಟೀಂ ಕೆಲಸ ಮಾಡಲಿದೆ. ಅಪಾಯಕಾರಿ ಜಾಗದಲ್ಲಿ ಇರುವವರನ್ನು ನೋಟಿಸ್ ಕೊಟ್ಟು ಸ್ಥಳಾಂತರ ಮಾಡುತ್ತೇವೆ. ಹೋಗಿಲ್ಲ ಅಂದರೆ ಪೊಲೀಸ್ ಬಲ ಪ್ರಯೋಗಿಸಿ ಸ್ಥಳಾಂತರ ಮಾಡುತ್ತೇವೆ. ಪ್ರಾಣ ಉಳಿಸಲು ಇಂಥ ಕ್ರಮಗಳ ಅಗ್ಯವಿದೆ. ಅಪಾಯಕಾರಿ ಪ್ರವಾಸಿ ತಾಣಗಳಲ್ಲಿ ಫೋಟೋ, ಸೆಲ್ಫಿ ತೆಗೆಯುತ್ತಾರೆ. ಇಂಥ ಜಾಗಗಳಲ್ಲಿ ನಿಷೇಧದ ಆದೇಶಗಳನ್ನು ನಾವು ಮಾಡಿದ್ದೇವೆ. ಎಂಟು ಬೀಚ್ಗಳಲ್ಲಿ 24 ಜನ ಹೋಂ ಗಾರ್ಡ್ಸ್ಗಳನ್ನ ನೇಮಿಸಿದ್ದೇವೆ. ಟ್ರೆಕ್ಕಿಂಗ್ ಪಾಯಿಂಟ್, ಕುಕ್ಕೆ ಬಳಿಯ ಕಾಡು ಪ್ರವೇಶ ಕೂಡ ನಿಷೇಧಿಸಿದ್ದು, ಇದನ್ನ ಮೀರಿದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಅಲ್ಲದೆ ಕಾಲು ಸಂಕ, ಸೇತುವೆ ಬಿರುಕು ಬಿಟ್ಟ ಜಾಗಗಳಲ್ಲಿ ಅಪಾಯ ಇದೆ. ಅಲ್ಲಿ ಜನ ಸಂಚಾರ ನಿಷೇಧದ ಫಲಕ ಅಳವಡಿಸಲು ಸೂಚಿಸಿದ್ದೇವೆ. ರೆಡ್ ಅಲರ್ಟ್ ಸಮಯದಲ್ಲಿ ಹೆಚ್ಚು ಗಮನ ಹರಿಸಲಾಗುತ್ತೆ. ಈ ಫಲಕ ಇದ್ದೂ ನಿಯಮ ಉಲ್ಲಂಘಿಸಿದ್ರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕಮಿಷನರ್ ಕುಲದೀಪ್ ಜೈನ್, ಎಸ್ಪಿ ರಿಷ್ಯಂತ್ ಉಪಸ್ಥಿತರಿದ್ದರು.