Share this news

ಯಾದಗಿರಿ: ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಕೊಡೆಕಲ್ ಗ್ರಾಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದು, ನಾರಾಯಣಪುರ ಎಡದಂಡೆ ನಾಲೆ ನವೀಕರಣ, ಬಹು ಗ್ರಾಮ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಿದ್ದಾರೆ.

ಈ ವೇಳೆ ಸಮಾರಂಭದ ವೇದಿಕೆಯಲ್ಲಿ ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ, ಭಾರತ್ ಮಾತಾಕಿ ಭಾಷಣ ಶುರು ಮಾಡಿದ್ದಾರೆ. ಕರ್ನಾಟಕದ ಎಲ್ಲ ಸಹೋದರ, ಸಹೋದರಿಯರಿಗೆ ವಂದನೆಗಳು ತಿಳಿಸಿದ್ದಾರೆ.

ಮುಂದಿನ 25 ವರ್ಷಗಳ ಸಂಕಲ್ಪ ಇಟ್ಟುಕೊಂಡು ಮುನ್ನುಗುತ್ತಿದ್ದೇವೆ. ಈಗಿನ ಸರ್ಕಾರದಿಂದ ಕರ್ನಾಟಕದ ಮತ್ತಷ್ಟು ಅಭಿವೃದ್ಧಿಯಾಗಲಿದೆ. ಕರ್ನಾಟಕದಲ್ಲಿ ಇದೀಗ ವಿಕಾಸ ಪರ್ವ ಸೃಷ್ಟಿಯಾಗಿದೆ. ಯಾದಗಿರಿ ಜಿಲ್ಲೆ ಹಿಂದುಳಿಯಲು ಹಿಂದಿನ ಸರ್ಕಾರಗಳೇ ಕಾರಣ, ವೋಟ್ ಬ್ಯಾಕಿಂಗ್ ಕಾರಣದಿಂದ ಯಾದಗಿರಿ ಹಿಂದುಳಿದಿದೆ. ಈಗಿನ ಸರ್ಕಾರದಿಂದ ಯಾದಗಿರಿ ಜಿಲ್ಲೆಯ ಅಭಿವೃದ್ಧಿಯಾಗಲಿದೆ.

ಯಾದಗಿರಿ ಜಿಲ್ಲೆಯ ಸಮೃದ್ಧ ಇತಿಹಾಸವನ್ನು ಹೊಂದಿದೆ. ಯಾದಗಿರಿಗೆ ದೊಡ್ಡ ಇತಿಹಾಸ, ಪರಂಪರಯೇ ಇದೆ. ರಟ್ಟೀಹಳ್ಳಿಯ ಕೋಟೆ ನಮ್ಮ ಪೂರ್ವಜರ ಪ್ರತೀಕವಾಗಿದೆ. ನೀರು ಸರಬರಾಜು ಬೃಹತ್ ಯೋಜನೆಗೆ ಚಾಲನೆ ನೀಡಿದ್ದೇವೆ. ನೀರಾವರಿ ಹೆದ್ದಾರಿ ಯೋಜನೆಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಯಾದಗಿರಿ, ಕಲಬುರಗಿ, ವಿಜಯಪುರ, ಜಿಲ್ಲೆಯ ರೈತರಿಗೆ ಅನುಕೂಲವಾಗಲಿದೆ ಎಂದರು.
ಈ ವೇಳೆ ರಾಜಾ ವೆಂಕಟಪ್ಪರನ್ನು ನೆನೆದ ಪ್ರಧಾನಿ ಮೋದಿ ರಾಜಾ ವೆಂಕಟಪ್ಪ ನಾಯಕ ಸ್ವಾತಂತ್ರ‍್ಯಕ್ಕಾಗಿ ಹೋರಾಟ ಮಾಡಿದ್ದರು ಎಂದರು.

ಉತ್ತರ ಕರ್ನಾಟಕದ ಅಭಿವೃದ್ಧಿ ಬಿಜೆಪಿ ಗುರಿ, ದೇಶದ ಹಲವಡೆ ಉತ್ತಮ ಆಡಳಿತ ಕೊಟ್ಟಿದ್ದೇವೆ. ಯಾದಗಿರಿಯಲ್ಲಿ ಹೊಸ ಉದ್ಯೋಗಳು ಸೃಷ್ಠಿಯಾಗುತ್ತಿವೆ. 100 ಜಿಲ್ಲೆಗಳಲ್ಲಿ ಟಾಪ್ 10 ರಲ್ಲಿ ಯಾದಗಿರಿ ಜಿಲ್ಲೆ ಇದೆ. ಹಿಂದಿನ ಸರ್ಕಾರಗಳು ಕೇವಲ ಘೋಷಣೆ ಮಾಡಿದ್ದವು. ನಾವು ಘೋಷಣೆಗಳನ್ನು ಈಡೇರಿಸುತ್ತೇವೆ ಎಂದರು.

ಕಂದಾಯ ಸಚಿವ ಆರ್ ಅಶೋಕ್ ಮಾತನಾಡಿ, ಲಂಬಾಣಿ ಜನರ ಮನೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಇಂದು 51900 ಜನರಿಗೆ ಹಕ್ಕು ಪತ್ರ ನೀಡಲಾಗುತ್ತದೆ. ಮುಂದಿನ ತಿಂಗಳು ಉಳಿದವರಿಗೆ ಹಕ್ಕು ಪತ್ರ ವಿತರಣೆ ಮಾಡಲಾಗುವದು. ಆ ಕಾರ್ಯಕ್ರಮಕ್ಕೆ ಅಮಿತ್ ಶಾ ಬರುತ್ತಾರೆ ಎಂದರು.

ಕೊಡೆಕಲ್​ ಸಮಾವೇಶ ಮುಗಿಸಿ ಮಳಖೇಡ ಗ್ರಾಮದತ್ತ ಪ್ರಧಾನಿ ನರೇಂದ್ರ ಮೋದಿ ಪ್ರಯಾಣ ಬೆಳೆಸಿದ್ದಾರೆ. Mi-17V5 ಹೆಲಿಕಾಪ್ಟರ್​ನಲ್ಲಿ ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಕೊಡೆಕಲ್​ನಿಂದ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಗ್ರಾಮಕ್ಕೆ ತೆರಳಿದ್ದಾರೆ. ಪ್ರಧಾನಿ ಜೊತೆ ರಾಜ್ಯಪಾಲ ಗೆಹ್ಲೋಟ್​, ಸಿಎಂ ಬೊಮ್ಮಾಯಿ ಕೂಡ ಪ್ರಯಾಣಿಸುತ್ತಿದ್ದಾರೆ.

 

Leave a Reply

Your email address will not be published. Required fields are marked *