ಕಾರ್ಕಳ:ಮುನಿಯಾಲು ಲಯನ್ಸ್ ಕ್ಲಬ್, ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ , ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ, ಮಣಿಪಾಲ್
ಡಾ.ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ ಕಾರ್ಕಳ,
ಪ್ರಾಥಮಿಕ ಆರೋಗ್ಯ ಕೇಂದ್ರ ದೊಂಡೆರಂಗಡಿ ಹಾಗೂ ಯತೀಶ್ ಶೆಟ್ಟಿ ಅಭಿಮಾನಿ ಬಳಗ ದೊಂಡೆರಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ದಿ. ಯತೀಶ್ ಶೆಟ್ಟಿ ದೊಂಡೇರಂಗಡಿ ಇವರ 14ನೇ ವರ್ಷದ ಸ್ಮರಣಾರ್ಥ ಬೃಹತ್ ರಕ್ತದಾನ, ಆಯುರ್ವೇದ ಆರೋಗ್ಯ ತಪಾಸಣೆ, ಉಚಿತ ಕಣ್ಣಿನ ತಪಾಸಣಾ ಶಿಬಿರವು ಡಿ 31ರಂದು ಭಾನುವಾರ ಪ್ರಾಥಮಿಕ ಆರೋಗ್ಯ ಕೇಂದ್ರ ದೊಂಡೆರಂಗಡಿಯಲ್ಲಿ ನಡೆಯಿತು.
ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನ ಕೃಷ್ಣಯ್ಯ ಶೆಟ್ಟಿ, ಕಡ್ತಲ ಗ್ರಾಮ ಪಂಚಾಯತ್ ನ ಅಧ್ಯಕ್ಷ ಸುಕೇಶ್ ಹೆಗ್ಡೆ ಶಿಬಿರವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ನ ಅಧ್ಯಕ್ಷ ಮಂಜುನಾಥ್ ವಹಿಸಿದರು.
ಅರವಿಂದ ಹೆಗ್ಡೆ ದಿ.ಯತೀಶ್ ಶೆಟ್ಟಿ ಅವರ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯಾದ ಡಾ. ಚಂದ್ರಿಕಾ ಕಿಣಿ ರಕ್ತದಾನದ ಬಗ್ಗೆ ಮತ್ತು ಆರೋಗ್ಯ ಇಲಾಖೆಯಲ್ಲಿ ಇರುವ ಸೌಲಭ್ಯದ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ರಕ್ತ ನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ಮಂಜುಶ್ರೀ ಪೈ, ಮುನಿಯಾಲು ಆಯುರ್ವೇದಿಕ್ ನ ವೈದ್ಯಾಧಿಕಾರಿ ಡಾ. ದೀಪಿಕಾ ಮತ್ತು ರೋಷನ್ ಕುಕ್ಕುಜೆ, ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಐಶ್ವರ್ಯ ಕುಲಕರ್ಣಿ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರಾಘವ ದೇವಾಡಿಗ, ಅರುಣ್ ಹೆಗ್ಡೆ, ಹಿರಿಯರಾದ ಭೋಜ ಪೂಜಾರಿ ಗ್ರಾಮ ಪಂಚಾಯತ್ ಸದಸ್ಯೆ ರೇಖಾ ಕುಕ್ಕುಜೆ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ನಂತರ ಅತಿಥಿಗಳು ಮತ್ತು ಅಭಿಮಾನಿಗಳು ದಿ.ಯತೀಶ್ ಶೆಟ್ಟಿ ಅವರ ಭಾವಚಿತ್ರಕ್ಕೆ ಪುಷ್ಪಾಂಜಲಿಯನ್ನು ಸಲ್ಲಿಸಿದರು.
ಲಯನ್ಸ್ ಕ್ಲಬ್ ನ ಡಾ. ಪ್ರಮೋದ್ ಕುಮಾರ್, ಶಂಕರ್ ಶೆಟ್ಟಿ, ಅಶೋಕ್ ಎಂ. ಶೆಟ್ಟಿ, ಸಂಪತ್ ಕುಮಾರ್, ಅಖಿಲೇಶ್ ಶೆಟ್ಟಿ, ಪ್ರಸನ್ನ ದೇವಾಡಿಗ ಮತ್ತಿತರರು ಸಹಕರಿಸಿದರು.
ಪ್ರಾರ್ಥನೆಯನ್ನು ಬೇಬಿ ಎಳ್ಳಾರೆ ನೆರವೇರಿಸಿದರು, ಸ್ವಾಗತ ಮತ್ತು ಕಾರ್ಯಕ್ರಮದ ನಿರೂಪಣೆಯನ್ನು ಲಯನ್ ಗೋಪಿನಾಥ್ ಭಟ್ ಮುನಿಯಾಲು ನೆರವೇರಿಸಿದರು.
ಶಿಬಿರದಲ್ಲಿ42 ಜನ ರಕ್ತದಾನ ಮಾಡಿದರು. 84 ಜನ ಕಣ್ಣಿನ ಪರೀಕ್ಷೆಯನ್ನು ಮಾಡಿದರು, 32 ಜನರಿಗೆ ಆಯುರ್ವೇದ ತಪಾಸಣೆ ನಡೆಸಿ ಉಚಿತ ಔಷಧಿಯನ್ನು ನೀಡಲಾಯಿತು
ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ
ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ