Share this news

ಚಾಮರಾಜನಗರ : 2022-23 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಪರೀಕ್ಷೆಯಲ್ಲಿ ಫೇಲಾಗಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಜೆಎಸ್ ಎಸ್ ಮಹಿಳಾ ಕಾಲೇಜಿನ ಹಾಸ್ಟೆಲ್ ನಲ್ಲಿ ನಡೆದಿದೆ.

ಗುಂಡ್ಲುಪೇಟೆ ತಾಲೂಕಿನ ಮೂಡಗೂರು ಗ್ರಾಮದ ವಿಜಯಲಕ್ಷ್ಮಿ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿನಿಯಾಗಿದ್ದ ಈಕೆ ಇಂದು ಫಲಿತಾಂಶ ನೋಡಿ ಫೇಲ್ ಆಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ. ಜೆಎಸ್ ಎಸ್ ಮಹಿಳಾ ಕಾಲೇಜಿನ ಹಾಸ್ಟೆಲ್ ನ ಕೊಠಡಿಯಲ್ಲೇ ಈಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *