ಮಂಗಳೂರು: ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ರಾಜಕೀಯ ನಾಯಕರು ಕರಾವಳಿ ಭಾಗದಲ್ಲಿ ಟೆಂಬಪ್ ರನ್ ಆರಂಭಿಸಿದ್ದು, ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಧರ್ಮಸ್ಥಳಕ್ಕೆ ಕುಟುಂಬ ಸಹಿತರಾಗಿ ಆಗಮಿಸಿದ್ದಾರೆ.
ಆದರೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಡಿಕೆಶಿ ಕುಟುಂಬಸ್ಥರು ಆಗಮಿಸಿದ್ದ ಹೆಲಿಕಾಪ್ಟರ್ ತಪಾಸಣೆಗೆ ಚುನಾವಣಾಧಿಕಾರಿಗಳು ಮುಂದಾಗಿದ್ದಾರೆ. ಈ ವೇಳೆ ಪೈಲಟ್, ಇದು ಖಾಸಗಿ ಹೆಲಿಕಾಪ್ಟರ್, ಪರಿಶೀಲಿಸಲು ಅವಕಾಶವಿಲ್ಲವೆಂದು ಮಾತಿಗೆ ಇಳಿದಿದ್ದಾರೆ. ಪೈಲಟ್ ರಾಮದಾಸ್ ಹಾಗೂ ಚುನಾವಣಾಧಿಕಾರಿ ನಡುವೆ ಮಾತಿನ ಚಕಮಕಿ ನಡೆಯಿತು. ಕೊನೆಗೂ ಹೆಲಿಕಾಪ್ಟರ್ ತಪಾಸಣೆ ಮಾಡಲಾಯಿತು.