ಬೆಂಗಳೂರು:ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ರಾಜ್ಯದ ಜನರು ತತ್ತರಿಸಿ ಹೋಗಿದ್ದು ಈ ನಡುವೆ ಸರ್ಕಾರ ಇದೀಗ ನಂದಿನಿ ಹಾಲಿನ ದರ ಹೆಚ್ಚಳ ಮಾಡಿ ರಾಜ್ಯದ ಜನತೆಗೆ ಮತ್ತೆ ಶಾಕ್ ನೀಡಿದೆ. ಮುಂದಿನ ಆಗಸ್ಟ್ 1 ರಿಂದಲೇ ನೂತನ ದರ ಜಾರಿಯಾಗಲಿದ್ದು ಪ್ರತೀ ಲೀಟರ್ ಹಾಲಿಗೆ 3 ರೂ ಹೆಚ್ಚಳವಾಗಲಿದೆ.
ಈ ಕುರಿತು ಶುಕ್ರವಾರ ಸಂಜೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿನ ಎಲ್ಲಾ ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್ ಅಧ್ಯಕ್ಷರ ಸಭೆ ನಡೆಸಿದರು. ಈ ಸಭೆಯಲ್ಲಿ ಹಾಲು ಒಕ್ಕೂಟಗಳು ನೀಡಿರುವಂತ ನಂದಿನಿ ದರ 5 ರೂ ಹೆಚ್ಚಳ ಪ್ರಸ್ತಾನೆಯ ಬಗ್ಗೆ ಮಹತ್ವದ ಚರ್ಚೆಯನ್ನು ನಡೆಸಿದರು.
ಅಲ್ಲದೇ ನಂದಿನಿ ಹಾಲಿನ ಪುಡಿಯ ದರವನ್ನು ಹೆಚ್ಚಳದ ಬಗ್ಗೆಯೂ ಚರ್ಚೆ ನಡೆಸಲಾಯಿತು. ಅಂತಿಮವಾಗಿ ಸತತ 3 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ, ನಂದಿನಿ ಹಾಲಿನ ದರವನ್ನು 5ರೂ ಹೆಚ್ಚಳದ ಬದಲಾಗಿ ಪ್ರತಿ ಲೀಟರ್ ಗೆ 3 ರೂ ಹೆಚ್ಚಳ ಮಾಡುವಂತ ಅಂತಿಮ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಈ ಪರಿಷ್ಕೃತ ಹೆಚ್ಚಳದ ದರವು ಆಗಸ್ಟ್ 1ರಿಂದಲೇ ಜಾರಿಗೆ ಬರಲಿದೆ