ಹೈದರಾಬಾದ್: ದೇಶದ ಅತ್ಯುನ್ನತ ಶಾಸಕಾಂಗದ ಮೇಲೆ 2001 ರ ಭಯೋತ್ಪಾದಕ ದಾಳಿಯ ವಾರ್ಷಿಕೋತ್ಸವದಂದು ಸಂಸತ್ತಿನಲ್ಲಿ ನಡೆದ ಪ್ರಮುಖ ಭದ್ರತಾ ಲೋಪದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ತೆಲಂಗಾಣ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ರೇವಂತ್ ರೆಡ್ಡಿ ಅವರು ʻಇದು ಕೇವಲ ಸಂಸತ್ ಭವನದ ಮೇಲಿನ ದಾಳಿಯಲ್ಲ. ನಮ್ಮ ಪ್ರಜಾಪ್ರಭುತ್ವದ ಮೌಲ್ಯಗಳ ಮೇಲಿನ ದಾಳಿʼ ಎಂದು ಹೇಳಿದ್ದಾರೆ.
ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಅವರು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನು ಒತ್ತಾಯಿಸಿದರು. ಭದ್ರತಾ ಉಲ್ಲಂಘನೆಯ ಹಿಂದಿನ ಪಿತೂರಿಯಲ್ಲಿ ಭಾಗಿಯಾಗಿರುವ ಆರು ಜನರಲ್ಲಿ ನಾಲ್ವರನ್ನು ಬುಧವಾರ ಬಂಧಿಸಲಾಗಿದೆ ಎಂದು ದೆಹಲಿ ಪೋಲೀಸ್ ಮೂಲಗಳು ತಿಳಿಸಿದ್ದು, ಇತರರನ್ನು ಹಿಡಿಯಲು ಶೋಧವನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.








