Share this news

ಬೆಂಗಳೂರು: ನಾಳೆಯಿಂದ(ಅ.5 ರಿಂದ ) ಬೆಂಗಳೂರು ವನ್,ಕರ್ನಾಟಕ ಒನ್,ಗ್ರಾಮ ವನ್ ಕೇಂದ್ರದಲ್ಲಿ ಬಿಪಿಎಲ್ ಕಾರ್ಡ್ ಹೆಸರು ಸೇರ್ಪಡೆ, ತಿದ್ದುಪಡಿ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಮೂರು ಹಂತಗಳಲ್ಲಿ ವಿವಿಧ ಜಿಲ್ಲೆಗಳಿಗೆ ದಿನಾಂಕ ನಿಗದಿಪಡಿಸಲಾಗಿದೆ

ಅಕ್ಟೋಬರ್ 5 ರಿಂದ 7 ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರದಲ್ಲಿ 3 ದಿನ ಬೆಳಗ್ಗೆ 10 ಗಂಟೆಯಿAದ ಸಂಜೆ 7 ಗಂಟೆವರೆಗೆ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಇನ್ನು 2ನೇ ಹಂತದಲ್ಲಿ ಬೆಳಗಾವಿ, ಬಾಗಲಕೋಟೆ, ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾಸನ, ಹಾವೇರಿ, ಕೊಡಗು, ಮಂಡ್ಯ, ಮೈಸೂರು, ಉಡುಪಿ, ಉತ್ತರ ಕನ್ನಡ, ವಿಜಯಪುರ ಸೇರಿ ಒಟ್ಟು 15 ಜಿಲ್ಲೆಗಳಿಗೆ ಅ.8 ರಿಂದ ಅ.10ರವರೆಗೆ ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಅವಕಾಶ ಕೊಡಲಾಗಿದೆ. 3ನೇ ಹಂತದಲ್ಲಿ ಕಲಬುರಗಿ, ಬಳ್ಳಾರಿ, ಬೀದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಯಾದಗಿರಿ, ವಿಜಯನಗರ ಸೇರಿ ಒಟ್ಟು 14 ಜಿಲ್ಲೆಗಳಲ್ಲಿ ಅ.11 ರಿಂದ ಅ.13ರವರೆಗೆ ಅವಕಾಶ ನೀಡಲಾಗಿದೆ.

ಬೆಳಿಗ್ಗೆ 10 ಗಂಟೆಯಿಂದ ಸಂಜೆ 07 ಗಂಟೆಯವರೆಗೆ ತಿದ್ದುಪಡಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಕಳೆದ ತಿಂಗಳು ಒಂದೊಂದು ಜಿಲ್ಲೆಗಳಿಗೂ ಸಮಯ ನಿಗದಿ ಪಡಿಸಲಾಗಿತ್ತು. ಈ ತಿಂಗಳು ಎಲ್ಲಾ ಜಿಲ್ಲೆಗಳಲ್ಲೂ ಮೂರು ದಿನ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಈ ಕುರಿತು ಆಹಾರ ಇಲಾಖೆ ಅಧಿಕೃತ ಮಾಹಿತಿ ನೀಡಿದೆ. 3 ದಿನ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬಿಪಿಎಲ್ ಕಾರ್ಡ್ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ಇಲಾಖೆ ಪ್ರಕಟಣೆ ಹೊರಡಿಸಿದೆ.

ಚಾಲ್ತಿಯಲ್ಲಿರುವ ಪಡಿತರ ಚೀಟಿಗಳಲ್ಲಿನ ಹೆಸರು ಸೇರ್ಪಡೆ/ತೆಗೆಯುವುದು, ವಿಳಾಸ ಬದಲಾವಣೆ, ಸದಸ್ಯರ ಹೆಸರು ತಿದ್ದುಪಡಿಗೆ ಬೆಳಗ್ಗೆ 10ರಿಂದ ರಾತ್ರಿ 8ರವರೆಗೆ ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಿದ್ದು, ನಿಗದಿಪಡಿಸಿದ ಅವಧಿಯೊಳಗೆ ಕರ್ನಾಟಕ ವನ್, ಗ್ರಾಮ ವನ್ ಮತ್ತು ಸೇವಾ ಸಿಂಧು ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಪ್ರಕಟಣೆ ತಿಳಿಸಿದೆ.

 

 

 

 

 

 

 

 

 

Leave a Reply

Your email address will not be published. Required fields are marked *