Share this news

ಕಾರ್ಕಳ : ಜನಪ್ರತಿನಿಧಿಯಾಗಿ ನನ್ನನ್ನು ಆಯ್ಕೆ ಮಾಡಿದ ಕಾರ್ಕಳದ ಜನತೆಗೆ ಸರಕಾರದ ಸೌಲಭ್ಯಗಳನ್ನು ತಲುಪಿಸುವಲ್ಲಿ ಯಶಸ್ವಿಯಾಗಿದ್ದೇನೆ ಎಂಬ ಧನ್ಯತಾ ಭಾವವಿದೆ ಎಂದು ಸಚಿವ ವಿ. ಸುನೀಲ್ ಕುಮಾರ್ ಹೇಳಿದರು.
ಅವರು ಫೆ. 7 ರಂದು ವಿಕಾಸ ಜನಸೇವಾ ಕಚೇರಿಯಲ್ಲಿ ಕಾರ್ಮಿಕ ಇಲಾಖೆ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸಹಯೋಗದೊಂದಿಗೆ ನಡೆದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ವಿವಿಧ ಸವಲತ್ತು ವಿತರಣಾ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ತಾಲೂಕಿನ 560 ಮಂದಿ ನೋಂದಾಯಿತ ಕಾರ್ಮಿಕರ 4 ಮತ್ತು 5 ನೇ ತರಗತಿ ಮಕ್ಕಳಿಗೆ ಶಿಕ್ಷಣ ಸಂಬAಧಿ ಪರಿಕರಗಳು ಹಾಗೂ ಮೇಸ್ತ್ರಿ, ಪ್ಲಂಬರ್ ಹೀಗೆ ಕಾರ್ಮಿಕರ ವೃತ್ತಿ ಸಂಬAಧಿತ ಸಲಕರಣೆಗಳನ್ನೊಳಗೊಂಡ ಕಿಟ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಮಿಕ ಇಲಾಖೆಯ ಅಧಿಕಾರಿ ಬಿ. ಆರ್. ಕುಮಾರ್, ಕಾರ್ಕಳ ಕಾರ್ಮಿಕರ ನಿರೀಕ್ಷಕ ಪ್ರಸನ್ನ ಕುಮಾರ್, ಉಡುಪಿ ಕಾರ್ಮಿಕರ ನಿರೀಕ್ಷಕ ವಿಜೇಂದ್ರ, ದುರ್ಗಾ ಗ್ರಾ. ಪಂ. ಅಧ್ಯಕ್ಷ ಸತೀಶ್ ನಾಯಕ್, ಬೈಲೂರು ಗ್ರಾ. ಪಂ. ಅಧ್ಯಕ್ಷ ಜಗದೀಶ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *