ಕಾರ್ಕಳ : ಪ್ರತ್ಯೇಕ ಪ್ರಕರಣದಲ್ಲಿ ಕಾರ್ಕಳ ತಾಲೂಕಿನ ಇಬ್ಬರು ವ್ಯಕ್ತಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.
ಕಾರ್ಕಳ ಪುರಸಭಾ ವ್ಯಾಪ್ತಿಯ ಕಸಬಾ ನಿವಾಸಿ ತೌಸೀಫಾ ಎಂಬವರ ಪತಿ ಮುಸ್ತಾಕ್ ಎಂಬವರು ಕಳೆದ 6 ತಿಂಗಳಿನಿಂದ ಹೊಟ್ಟೆನೋವು ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತಿದ್ದು ಮೂಡಬಿದ್ರೆಯ ಆಳ್ವಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಆದರೆ ಸಾಕಷ್ಟು ಚಿಕಿತ್ಸೆ ಪಡೆದುಕೊಂಡರೂ ಗುಣಮುಖರಾಗದ ಹಿನ್ನೆಲೆಯಲ್ಲಿ ಮನನೊಂದಿದ್ದ ಅವರು ಜೀವನದಲ್ಲಿ ಜಿಗುಪ್ಸೆಗೊಂಡು ಬುಧವಾರ ರಾತ್ರಿ ತನ್ನ ಮನೆಯ ಬಳಿಯ ಸಂಬಂಧಿಕರ ಮನೆಯ ಹಿಂಭಾಗದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ಕಾರ್ಕಳ ಮೆಸ್ಕಾಂ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಮುಂಡ್ಲಿ ಗ್ರಾಮದ ಜಾರ್ಕಳ ನಿವಾಸಿ ಸಂದೀಪ್ ಶೆಟ್ಟಿ(30ವ) ಎಂಬವರು ಕೆಲಸ ಖಾಯಂ ಆಗಿಲ್ಲ ಎಂಬ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆಗೊಂಡು ಬುಧವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.