Share this news

ಮಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಇನ್ನೇನು ಕೆಲ ತಿಂಗಳು ಬಾಕಿ ಇದೆ. ಪ್ರತಿಯೊಂದು ಪಕ್ಷಗಳು ಸಹ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿವೆ.

ಇತ್ತ ಎಸ್​ಡಿಪಿಐ ಕೂಡ ಚುನಾವಣೆಗೆ ತಯಾರಿ ನಡೆಸಿದ್ದು, ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಶಾಫಿ ಬೆಳ್ಳಾರೆ ಗೆ ಎಸ್​ಡಿಪಿಐ ಮುಂದಿನ ವಿಧಾನಸಭಾ ಚುನಾವಣೆಗೆ ಪುತ್ತೂರಿನಿಂದ ಟಿಕೆಟ್​ ಘೋಷಿಸಿದೆ.

ಪುತ್ತೂರು ವಿಧಾನ ಸಭಾ ಕ್ಷೇತ್ರದಿಂದ ಶಾಫಿ ಬೆಳ್ಳಾರೆ ಅವರನ್ನು ಕಣಕ್ಕಿಳಿಸುವುದಾಗಿ ಎಸ್​ಡಿಪಿಐ ಕಾರ್ಯಕರ್ತರ ಸಮಾವೇಶ ದಲ್ಲಿ ಘೋಷಣೆ ಮಾಡಲಾಗಿದೆ. ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್​ ಖಾನ್​ ಆಗಿದ್ದು, ಶಾಫಿ ಬೆಳ್ಳಾರೆ ಎಸ್​ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಆಗಿದ್ದಾರೆ.

ಸದ್ಯ ಪ್ರವೀಣ್ ನೆಟ್ಟಾರ್ ಪ್ರಕರಣದಲ್ಲಿ NIA ಬಂಧನದಲ್ಲಿರುವ ಶಾಫಿ ಬೆಳ್ಳಾರೆ, ಜೈಲಿನಿಂದಲೇ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಆರೋಪಿ ಶಾಫಿ ಬೆಳ್ಳಾರೆಯನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಮೂಲಕ SDPI ಭಾರಿ ವಿವಾದ ಸೃಷ್ಟಿಸಿದೆ.

Leave a Reply

Your email address will not be published. Required fields are marked *