ಕೊಪ್ಪಳ : ಬೆಂಗಳೂರಿನಲ್ಲಿ ಈಡಿಗ ಸಮಾವೇಶ ಆ ಯೋಜನೆ ಮಾಡಲಾಗಿದ್ದು ಈ ವಿಚಾರವಾಗಿ ಬಿಕೆ ಹರಿಪ್ರಸಾದ ರನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ಪ್ರಣವಾನಂದ ಸ್ವಾಮೀಜಿ ಕಿಡಿ ಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುಳಿದ ವರ್ಗದ ನಾಯಕನಾಗಿ ಬೆಳೆಯದಂತೆ ಮೂಲೆಗುಂಪು ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಸಚಿವ ಮಧು ಬಂಗಾರಪ್ಪ ವಿರುದ್ಧ ಪ್ರಣವಾನಂದ ಸ್ವಾಮೀಜಿ ವಾಗ್ದಾಳಿ ನಡೆಸಿದ್ದಾರೆ.
ಉದ್ದೇಶಪೂರ್ವಕವಾಗಿ ಹರಿಪ್ರಸಾದ್ ಅವರನ್ನು ಸಮಾವೇಶದಿಂದ ದೂರವಿಡಲಾಗಿದೆ.ಮಧು ಬಂಗಾರಪ್ಪ ಬಳಸಿಕೊಂಡು ಈಡಿಗ ಸಮಾಜ ಹೊಡೆಯಲು ಸಿಎಂ ಸಿದ್ದರಾಮಯ್ಯ ಯತ್ನಿಸುತ್ತಿದ್ದಾರೆ. ಮಧು ಮೊದಲು ಸೋದರ ಕುಮಾರ್ ರನ್ನು ವೇದಿಕೆ ಕರೆದುಕೊಂಡು ಬರಲಿ ಎಂದು ಗಂಗಾವತಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಪೀಠದ ಪ್ರಣವಾನದ ಶ್ರೀ ಹೇಳಿಕೆ ನೀಡಿದರು.
ಈಡಿಗ ಬಿಲ್ಲವ ಹಾಗೂ ನಾಮಧಾರಿ ಸಮುದಾಯದ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ಪ್ರಣವಾನಂದ ಸ್ವಾಮೀಜಿ ಸೇರಿದಂತೆ ಹಲವರ ಸಮ್ಮುಖದಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ಆ ಯೋಜನೆ ಮಾಡಲಾಗಿದೆ. ಇತ್ತ ಬಿಕೆ ಹರಿಪ್ರಸಾದ್ ಕೂಡ ರಾಜಕೀಯ ಕುತಂತ್ರಕ್ಕಾಗಿ ಸಮುದಾಯ ಸಮಾವೇಶ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ