Share this news

ಮೂಡುಬಿದಿರೆ: ಮಂಗಳೂರು- ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ತೋಡಾರಿನ ಹಂಡೇಲು ಎಂಬಲ್ಲಿ ಬೈಕ್ ಗೆ  ಖಾಸಗಿ ಬಸ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಸೋಮವಾರ ಸಂಜೆ ನಡೆದಿದೆ.

ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಪ್ರಥಮ ಬಿಸಿಎ ವಿದ್ಯಾರ್ಥಿ ಎಡಪದವು ಚಂದ್ರಹಾಸ ಆಚಾರ್ಯ ಅವರ ಪುತ್ರ ಕಾರ್ತಿಕ್ (19ವ) ಮೃತಪಟ್ಟ ವಿದ್ಯಾರ್ಥಿ.


ಕಾರ್ತಿಕ್ ಕಾಲೇಜು ಮುಗಿಸಿ ಬೈಕಿನಲ್ಲಿ ಸಹಪಾಠಿ, ಹರ್ಷ ಎಂಬವರೊಂದಿಗೆ ಮನೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು ಹರ್ಷ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಮಂಗಳೂರಿನಿಂದ ಮೂಡುಬಿದಿರೆಗೆ ಬರುತ್ತಿದ್ದ ಖಾಸಗಿ ಎಕ್ಸ್ಪ್ರೆಸ್ ಬಸ್ ಮತ್ತೊಂದು ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ತೀರಾ ಬಲಭಾಗಕ್ಕೆ ಚಲಿಸಿ ಮುಂಭಾಗದಲ್ಲಿ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಕಾರ್ತಿಕ್ ಹೆಲ್ಮೆಟ್ ಧರಿಸಿದ್ದರೂ ಆತನ ಪ್ರಾಣ ಉಳಿಯಲಿಲ್ಲ. ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ

Leave a Reply

Your email address will not be published. Required fields are marked *