Share this news

ಮಂಗಳೂರು: ಮಂಗಳೂರಿನಲ್ಲಿ ಗಾಂಜಾ ಪ್ರಕರಣದಲ್ಲಿ ವೈದ್ಯರ ಬಂಧನ ಪ್ರಕರಣಕ್ಕೆ ಸಂಬಂಧಿಸಿ ಕೆಎಂಸಿ‌ ಆಸ್ಪತ್ರೆ ಆಡಳಿತ ಮಂಡಳಿ ಇಬ್ಬರು ವೈದ್ಯರನ್ನು ವಜಾಗೊಳಿಸಿದೆ. ಡ್ರಗ್ಸ್​​ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ಅತ್ತಾವರ ಕೆಎಂಸಿ ಆಸ್ಪತ್ರೆ ಮೆಡಿಕಲ್ ಆಫೀಸರ್ ಡಾ.ಸಮೀರ್, ಮಣಿಪಾಲ ಕೆಎಂಸಿ ಆಸ್ಪತ್ರೆ ಮೆಡಿಕಲ್ ಸರ್ಜನ್ ಡಾ.ಮಣಿಮಾರನ್ ಅವರನ್ನು ಆಡಳಿತ ಮಂಡಳಿ ವಜಾ ಮಾಡಿ ಗುತ್ತಿಗೆ ರದ್ದುಪಡಿಸಿದೆ.

ಉಳಿದ 7 ವೈದ್ಯಕೀಯ ವಿದ್ಯಾರ್ಥಿಗಳು ಕಾಲೇಜಿನಿಂದ ಅಮಾನತುಗೊಳಿಸಲಾಗಿದೆ. ವೈದ್ಯಕೀಯ ವಿದ್ಯಾರ್ಥಿಗಳಾದ ಡಾ‌‌.ನದೀಯಾ ಸಿರಾಜ್, ಡಾ.ವರ್ಷಿಣಿ ಪ್ರತಿ, ಡಾ.ರಿಯಾ ಚಡ್ಡಾ, ಡಾ.ಇರಾ ಬಾಸಿನ, ಡಾ.ಕ್ಷಿತಿಜ್ ಗುಪ್ತಾ ಹಾಗೂ ಡಾ.ವಿ.ಎಸ್‌.ಹರ್ಷಕುಮಾರ್ ಅಮಾನತುಗೊಳಿಸಲಾಗಿದೆ. ಈ ಬಗ್ಗೆ ಮಂಗಳೂರು ಪೊಲೀಸ್ ಆಯುಕ್ತರಿಗೆ ಕೆಎಂಸಿ ಡೀನ್ ಉನ್ನಿಕೃಷ್ಣನ್ ಮಾಹಿತಿ ನೀಡಿದ್ದಾರೆ.

ಪಿಜಿ, ಹಾಸ್ಟೆಲ್​​ಗಳಲ್ಲಿದ್ದ ಯುವತಿಯರು, ತಮ್ಮ ಬಾಯ್​ ಫ್ರೆಂಡ್​ಗಳ ಜತೆ ಅಪಾರ್ಟ್​​​​​ಮೆಂಟ್​​ಗೆ ಶಿಫ್ಟ್​ ಆಗಿದ್ದರು ಎಂಬ ಸಂಗತಿ ಪೊಲೀಸರ ತನಿಖೆ ವೇಳೆ ಬಯಲಾಗಿತ್ತು. ಇವರು ಓವರ್​ನೈಟ್​​​ ಪಾರ್ಟಿಯಲ್ಲಿ ಡಾಕ್ಟರ್ಸ್​, ಸ್ಟೂಡೆಂಟ್​ಗಳೆಲ್ಲ ಗಾಂಜಾ  ಎಳಿಯುತ್ತಿದ್ದ ಬಗ್ಗೆ. ಲೇಟ್​ ನೈಟ್​ ಪಾರ್ಟಿ ಬಗ್ಗೆ ಅನೇಕ ಸಲ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು

Leave a Reply

Your email address will not be published. Required fields are marked *