ಬೆಂಗಳೂರು: ಮಂಗಳೂರಿನಲ್ಲಿ ನಡೆದಿದ್ದ ಕುಕ್ಕಲ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಂಕಿತ ಉಗ್ರ ಶಾರೀಕ್ ಗುಣಮುಖನಾಗಿ ಇಂದು ಆಸ್ಪತ್ರೆಯತಿಂದ ಡಿಸ್ಚಾರ್ಜ್ ಆಗಿದ್ದು ಇದೀಗ ಆರೋಪಿಯನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳಿಗೆ ಹೆಚ್ಚಿನ ವಿಚಾರಣೆಗಾಗಿ ನೀಡಿ ಕೋರ್ಟ್ ಆದೇಶಿಸಿದೆ.
ಶಂಕಿತ ಉಗ್ರ ಶಾರೀಕ್ ನನ್ನು ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡುವಂತೆ ಎನ್ಐಎ ಅಧಿಕಾರಿಗಳು ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಈ ಕುರಿತು ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದಂತ ಎನ್ಐಎ ವಿಶೇಷ ನ್ಯಾಯಾಲಯವು, ಶಂಕಿತ ಉಗ್ರ ತಾರಿಕ್ ಅನ್ನು ಮಾರ್ಚ್ 15ರವರೆಗೆ ಎನ್ಐಎ ಅಧಿಕಾರಿಗಳ ವಶಕ್ಕೆ ನೀಡಿ ಆದೇಶಿಸಿದೆ.
ಇದೀಗ ಶಾರೀಕ್ನನ್ನು ತಮ್ಮ ವಶಕ್ಕೆ ಪಡೆಯುತ್ತಿರುವ ಅಧಿಕಾರಿಗಳು ಪ್ರಕರಣ ಸಂಬAಧ ಹೆಚ್ಚಿನ ವಿಚಾರಣೆಯನ್ನು ನಡೆಸಿ, ಮಂಗಳೂರು ಕುಕ್ಕಲ್ ಬಾಂಬ್ ಸ್ಪೋಟಕ ಪ್ರಕರಣದ ಮಾಹಿತಿಯನ್ನು ಹೊರ ಹಾಕಲಿದ್ದಾರೆ.