Share this news

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಕೋಟ್ಯಾಂತರ ರೂಪಾಯಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಹೈಕೋರ್ಟ್ ವಕೀಲ ನಟರಾಜ ಶರ್ಮಾ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಅನರ್ಹಗೊಂಡಿರುವ ಕಂಪೆನಿಗೆ ಗುತ್ತಿಗೆ ನೀಡಿ ಸುಮಾರು 600 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ.

ಕಪ್ಪುಪಟ್ಟಿಯಲ್ಲಿರುವ ಕ್ರಿಸ್ಟಿ ಫ್ರೈಡ್ ಗ್ರಾಮ್ ಕಂಪನಿಗೆ ಟೆಂಡರ್ ನೀಡಲಾಗಿದೆ ಎಂದು ಆರೋಪಿಸಿರುವ ವಕೀಲರಾದ ನಟರಾಜ ಶರ್ಮಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಜೆ.ಸಿ.ಪ್ರಕಾಶ್, ಇಲಾಖೆಯ ನಿರ್ದೇಶಕರ ವಿರುದ್ಧವೂ ಲೋಕಾಯುಕ್ತ ಸಂಸ್ಥೆಗೆ ದೂರು ನೀಡಿದ್ದಾರೆ.
ಗುತ್ತಿಗೆದಾರರಿಂದ ಅಂಗನವಾಡಿಗಳಿಗೆ ಪೂರೈಕೆಯಾಗುವ ಆಹಾರ ಗುಣಮಟ್ಟ ಇರುವುದಿಲ್ಲ. ಹೀಗಾಗಿ ಸ್ಥಳೀಯ ಸೇವಾ ಸಂಘಗಳೇ ಆಹಾರ ಪೂರೈಕೆ ಮಾಡುವಂತೆ ಹೈ ಕೋರ್ಟ್ ಆದೇಶ ನೀಡಿತ್ತು. ಆದರೆ, ಆದೇಶ ಉಲ್ಲಂಘನೆ ಮಾಡಿ ಕಪ್ಪು ಪಟ್ಟಿಯಲ್ಲಿರುವ ಪೂರೈಕೆ ಕಂಪನಿಗೆ ಟೆಂಡರ್ ನೀಡಿ ಅವ್ಯವಹಾರ ನಡೆಸಲಾಗಿದೆ ಎಂದು ನಟರಾಜ ಶರ್ಮಾ ದಾಖಲಿಸಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.

Leave a Reply

Your email address will not be published. Required fields are marked *