Share this news

ಉಡುಪಿ: ಲೋಕಸಭೆ ಹಾಗೂ ವಿಧಾನಸಭೆಗಳ ಸದಸ್ಯರ ಪೈಕಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ಮಸೂದೆಯನ್ನು 2008ರಲ್ಲೇ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಆಡಳಿತಾವಧಿಯಲ್ಲಿ ಜಾರಿಗೊಳಿಸಲು‌ ಉದ್ದೇಶಿಸಿದ್ದ ಮಸೂದೆ ಇಂದು ಲೋಕಸಭೆ ಹಾಗೂ ರಾಜ್ಯಸಭೆಗಳಲ್ಲಿ ಅಂಗೀಕಾರವಾಗಿರುವುದು ಸ್ವಾಗತಾರ್ಹ,ಆದರೆ ಈ ಮಸೂದೆ ಕಾಂಗ್ರೆಸ್ ಸರ್ಕಾರದ ಅವಧಿಯ ಸಾಧನೆಯಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್ ಹೇಳಿದ್ದಾರೆ.

ಈ ಕಾಯಿದೆ ಅನುಷ್ಠಾನದೊಂದಿಗೆ ಮುಂದಿನ ದಿನಗಳಲ್ಲಿ 543 ಸದಸ್ಯತ್ವ ಬಲದ ಲೋಕಸಭೆಯಲ್ಲಿ 181 ಮಹಿಳಾ ಸದಸ್ಯರು ಸ್ಥಾನ ಪಡೆಯಲಿದ್ದಾರೆ. ಆದರೂ ಹಿಂದುಳಿದ ವರ್ಗ ಮತ್ತು ಎಸ್ಸಿ ಎಸ್ಟಿಗಳಿಗೆ ಈ ಮೀಸಲಾತಿಯಡಿ ಒಳಮೀಸಲಾತಿ ಘೋಷಿಸದಿರು ವುದು ನಿರಾಸೆಯಾಗಿದೆ, ಜನಗಣತಿ ಮತ್ತು ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಯ ಹೊರತಾಗಿ ಮಸೂದೆ ಜಾರಿ ಕೇವಲ ಹೆಸರಿಗೆ ಮಾತ್ರವಷ್ಟೆ ಉಳಿದುಕೊಳ್ಳಲಿದೆ. ರಾಜ್ಯಸಭೆ ಮತ್ತು ವಿಧಾನ ಪರಿಷತ್ ಸದಸ್ಯತ್ವಕ್ಕೂ ಮಸೂದೆ ಅನ್ವಯವಾಗಬೇಕಾದುದು ಇಂದಿನ ಆದ್ಯತೆಯಾಗಿದೆ ಎಂದಿರುವ ಕಾಂಗ್ರೆಸ್ ಈಗಾಗಲೇ ಮಂಡನೆಯಾಗಿರುವ ಮಸೂದೆಯಲ್ಲಿ ಈ ಬಗ್ಗೆ ಸ್ಪಷ್ಟತೆ ಇಲ್ಲದಿರುವುದು ವಿಷಾದನೀಯ ಎಂದಿದ್ದಾರೆ.
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಆಡಳಿತದ ಅವಧಿಯಲ್ಲಿ 1989ರಲ್ಲಿ ಲೋಕಸಭೆಯಲ್ಲಿ ಮಂಡಿಸಿದ್ದ ನಗರಾಡಳಿತ ಮತ್ತು ಗ್ರಾಮ ಪಂಚಾಯತುಗಳಿಗೆ ಮೂರನೆ ಒಂದು ಮಹಿಳಾ ಮೀಸಲಾತಿ ಮಸೂದೆ ಇಂದಿನ 33ಶೇ. ಮಹಿಳಾ ಮೀಸಲಾತಿ ಮಸೂದೆಯ ಹಿಂದಿನ ಶಕ್ತಿಯಾಗಿದೆ. ಅಂದು ಈ ಮಸೂದೆ ಮಂಡನೆಯ ಸಂದರ್ಭ ರಾಜ್ಯ ಸಭೆಯಲ್ಲಿ ವಿರೋಧೀ ಬಣದಲ್ಲಿ ಗುರುತಿಸಿಕೊಂಡಿದ್ದ ಬಿಜೆಪಿ‌ ಇದೀಗ 34ವರ್ಷಗಳ ಬಳಿಕ ಕಳೆದ 15 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ 33ಶೇ ಮಹಿಳಾ ಮೀಸಲಾತಿ ಮಸೂದೆಯನ್ನು ಮುಂದಿನ 2024ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅನುಷ್ಠಾನಗೊಳಿಸಲಾಗಿದೆ. ಅದರೊಂದಿಗೆ ದೇಶವ್ಯಾಪಿ ಜನಾಕರ್ಷಣೆಗೊಳ್ಳುತ್ತಿರುವ ರಾಜ್ಯದ ಸಿದ್ಧರಾಮಯ್ಯ ಸರಕಾರದ ಶಕ್ತಿ, ಗೃಹಲಕ್ಷ್ಮಿಯೇ ಮೊದಲಾದ ಪಂಚ ಗ್ಯಾರಂಟಿ ಯೋಜನೆಗಳ ಭಯವೂ ಅಡಗಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್ ನಕ್ರೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *