ಬೆಂಗಳೂರು: ಈಗಾಗಲೇ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣಗಳನ್ನು ಹೈಕೋರ್ಟ್ ರದ್ದುಗೊಳಿಸಿತ್ತು, ಇದೀಗ 2015ರ ಲೋಕಾಯುಕ್ತ ಪೊಲೀಸರು ದಾಖಲಿಸಿಕೊಂಡಿದ್ದ ದೂರನ್ನು ಬುಧವಾರ ಹೈಕೋರ್ಟ್ ರದ್ದುಪಡಿಸಿದ್ದು, ಈ ಮೂಲಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದೆ.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಡಿನೋಟಿಫೇಕನ್ ಅಕ್ರಮ ಸಂಬAಧ ಡಿಸೆಂಬರ್ 19, 2015ರಲ್ಲಿ ಲೋಕಾಯುಕ್ತ ಪೊಲೀಸರಿಂದ ದಾಖಲಾಗಿದ್ದ ಪ್ರಕರಣದ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಡೆಸಿತು. ಈ ಹಿಂದೆ ಸಿಎಜಿ ವರದಿ ಆಧರಿಸಿ 15 ಕೇಸ್ ಗಳನ್ನು ರದ್ದುಪಡಿಸಲಾಗಿದೆ. ಹಿಂದಿನ ತೀರ್ಪು ಆಧರಿಸಿ ಡಿ.19, 2015ರ ಡಿನೋಟಿಫಿಕೇಷನ್ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿ ಆದೇಶಿಸಿದೆ.

ಮಾಜಿ ಸಿಎಂ ಯಡಿಯೂರಪ್ಪ ಅವರು, ಸಿಎಂ ಆಗಿದ್ದ ಅವಧಿಯಲ್ಲಿ ನಡೆದಿದ್ದ ಡಿನೋಟಿಫಿಕೇಷನ್ ಸಂಬAಧ ಹಲವು ದೂರುಗಳು ದಾಖಲಾಗಿದ್ದವು. ಈ ಎಲ್ಲವನ್ನು ಸಿಎಜಿ ವರದಿಯನ್ನು ಆಧರಿಸಿ ಹೈಕೋರ್ಟ್ ರದ್ದುಗೊಳಿಸಿತ್ತು. ಈ ಬೆನ್ನಲ್ಲೇ ಮತ್ತೊಂದು ಪ್ರಕರಣವನ್ನು ರದ್ದುಗೊಳಿಸಿ ಆದೇಶಿಸಿದೆ.

