Share this news

ತುಮಕೂರು: ರಾಜ್ಯದಲ್ಲಿನ ಬಿಜೆಪಿ ಭ್ರಷ್ಟಾಚಾರ ಖಂಡಿಸಿ, ಮಾರ್ಚ್ 9ರಂದು ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ ಕರ್ನಾಟಕ ಬಂದ್ ಗೆ  ಕರೆ ನೀಡಲಾಗಿದೆ.

ತುಮಕೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು, ಮಾರ್ಚ್ 9ರಂದು ಬಿಜೆಪಿ ಭ್ರಷ್ಟಾಚಾರ ಖಂಡಿಸಿ, ರಾಜ್ಯಾಧ್ಯಂತ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 11 ಗಂಟೆಯವರೆಗೆ ಕರ್ನಾಟಕ ಬಂದ್ ನಡೆಸಲಾಗುತ್ತದೆ. ಅಂದು ಎಲ್ಲಾ ವ್ಯಾಪಾರಿಗಳು ಬಂದ್ ಗೆ ಬೆಂಬಲ ನೀಡುವಂತೆ ಕೋರಿದ್ದಾರೆ.

ಮಾರ್ಚ್ 9ರಂದು ಕರೆ ನೀಡಿರುವ ಕರ್ನಾಟಕ ಬಂದ್ ವೇಳೆಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದು, ಕಾನೂನು ಕೈಗೆತ್ತಿಕೊಳ್ಳುವಂತ ಕೆಲಸ ಮಾಡಬಾರದು. ರಾಜ್ಯದಲ್ಲಿನ ಭ್ರಷ್ಟಾಚಾರ ನಿರ್ಮೂಲನೆಗಾಗಿ ಎಲ್ಲರ ಸಹಕಾರ ಬೇಕು ಎಂದರು.

ಈ ಬಗ್ಗೆ ರಾಷ್ಟ್ರ ನಾಯಕರ ಜೊತೆಗೂ ಚರ್ಚಿಸಲಾಗಿದೆ. ರಾಜ್ಯಕ್ಕೆ ಬಿಜೆಪಿ ಅಗೌರವ ತರುವಂತ ಕೆಲಸ ಮಾಡುತ್ತಿದೆ. ಜನರಿಗೆ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರವನ್ನು ತಿಳಿಸಿಕೊಡುವ ನಿಟ್ಟಿನಲ್ಲಿ ಬಂದ್ ಗೆ ಕರೆ ನೀಡಲಾಗಿದೆ. ಎಲ್ಲಾ ಸಂಘಟನೆಗಳು, ಕಾರ್ಯಕರ್ತರು ಬೆಂಬಲಿಸಿ, ಶಾಂತಿಯುತವಾಗಿ ಬಂದ್ ನಡೆಸುವಂತೆ ಮನವಿ ಮಾಡಿದರು.

Leave a Reply

Your email address will not be published. Required fields are marked *