Share this news

ಕಾರ್ಕಳ : ತಾಲೂಕಿನ ಮುಳ್ಕಾಡು ಶ್ರೀ ಈಶ್ವರ ಭಜನಾ ಮಂಡಳಿಯ 30ನೇ ವರ್ಷದ ಭಜನಾ ಮಂಗಲೋತ್ಸವ, ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆಯು ಫೆ.18 ರಂದು ಜರಗಿತು.

ಶ್ರೀ ಜಗದ್ಗುರು ರಾಘವೇಂದ್ರ ಪೀಠದ ಶ್ರೀ ಮುಕ್ತಾನಂದ ಸ್ವಾಮೀಜಿ ಧಾರ್ಮಿಕ ಪ್ರವಚನ ನೀಡಿ, ಭಜನೆಯಿಂದ ವಿಭಜನೆ ಇಲ್ಲ .ಕಳೆದ 30 ವರ್ಷಗಳಿಂದ ಒಂದು ಕುಟುಂಬದಂತೆ ಒಗ್ಗಟ್ಟಿನಿಂದ ಭಜನಾ ಕಾರ್ಯಕ್ರಮ ಮಾಡುತ್ತಿದ್ದೀರಿ ಇದು ಇಡೀ ಜಿಲ್ಲೆಗೆ ಮಾದರಿಯಾಗಿದೆ ಎಂದರು.

ಸಚಿವ ಸುನಿಲ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಡ್ತಲ ಪಂಚಾಯತ್ ಅಧ್ಯಕ್ಷ ಮಾಲತಿ ದಿನೇಶ್ ಕುಲಾಲ್, ಪೂನಾ ಬಿಲ್ಲವ ಸಂಘದ ಅಧ್ಯಕ್ಷ ವಿಶ್ವನಾಥ ಪೂಜಾರಿ ಮತ್ತಿತರರು ಉಪಸಿತರಿದ್ದರು. ಕುಶಲ ಮತ್ತು ಬಳಗ ಪ್ರಾರ್ಥಿಸಿದರು. ಸತೀಶ್ ಪೂಜಾರಿ ಎಳ್ಳಾರೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕುಮಾರಿ ಕಾವ್ಯ ವಂದಿಸಿದರು. ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಹರೀಶ್ ನಾಯಕ್ ಅಜೆಕಾರು ಕಾರ್ಯಕ್ರಮ ನಿರೂಪಿಸಿದರು

Leave a Reply

Your email address will not be published. Required fields are marked *