Share this news

ಬೆಂಗಳೂರು: ವೇತನ ಹೆಚ್ಚಿಸುವಂತೆ ಕರ್ನಾಟಕ ವಿದ್ಯುತ್​ ಪ್ರಸರಣ ನಿಗಮ ನಿಯಮಿತ ನೌಕರರ ಸಂಘ ನೀಡಿದ ಗಡುವು ಇಂದಿಗೆ ಅಂತ್ಯವಾಗಿದೆ. ಈಗ ರಾಜ್ಯ ಸರ್ಕಾರ ಕೆಪಿಟಿಸಿಎಲ್ ಮತ್ತು ಎಲ್ಲಾ ಎಸ್ಕಾಂಗಳ ನೌಕರರ ವೇತನ ಪರಿಷ್ಕರಣೆ ಮಾಡಿದೆ.

2022ರ ಏಪ್ರಿಲ್​ನಿಂದ ಅನ್ವಯವಾಗುವಂತೆ, ಈಗಿರುವ ವೇತನದ ಮೇಲೆ ಶೇ 20ರಷ್ಟು ಹೆಚ್ಚಳ ಮಾಡಲು ನಿರ್ಧರಿಸಿ ನೌಕರರಿಗೆ ಸಿಹಿ ಸುದ್ದಿ ನೀಡಿದೆ. ಈ ಹಿನ್ನೆಲೆ ಕೆಪಿಟಿಸಿಎಲ್​ ನೌಕರರು ನಾಳೆಯ ಮುಷ್ಕರನ್ನು ವಾಪಸ್ ಪಡೆದಿದ್ದಾರೆ.

ವೇತನ ಹೆಚ್ಚಿಸುವಂತೆ KPTCL ನೌಕರರು ರಾಜ್ಯ ಸರ್ಕಾರಕ್ಕೆ ನೀಡಿದ 14 ದಿನಗಳ ಗಡುವು ನೀಡಿತ್ತು. ಅಲ್ಲದೆ ನಾಳೆ (ಮಾ.16) ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಪ್ರತಿಭಟನೆ ಮಾಡಲು ಕೆಪಿಟಿಸಿಎಲ್​ ನೌಕರರ ಸಂಘ ಕರೆ ಕೊಟ್ಟಿತ್ತು. ಈ ಹಿನ್ನೆಲೆ ಎಲ್ಲಾ ಎಸ್ಕಾಂಗಳು ನೌಕರರು ಕರ್ತವ್ಯಕ್ಕೆ ಗೈರಾಗಿ ಮುಷ್ಕರ ನಡೆಸಲು ನಿರ್ಧರಿಸಿದ್ದರು. ಸುಮಾರು 50 ಸಾವಿರ ನೌಕರರು ನಾಳೆಯ ಮುಷ್ಕರದಲ್ಲಿ ಭಾಗಿಯಾಗಲಿದ್ದರು. ಈ ಹಿನ್ನೆಲೆ ಎಚ್ಚತ್ತ ಸರ್ಕಾರ ಶೇ20 ರಷ್ಟು ನೌಕರರ ವೇತನವನ್ನು ಹೆಚ್ಚಳ ಮಾಡಿದೆ.

Leave a Reply

Your email address will not be published. Required fields are marked *