ಮೂಡುಬಿದಿರೆ: ಸಾಮಾನ್ಯವಾಗಿ ಮನುಷ್ಯನಿಗೆ ಬರುವ ಹೃದಯ ಸಂಬAಧಿ ಕಾಯಿಲೆಗಳಲ್ಲಿ ಮೂರು ವಿಧಗಳಿವೆ. ಹೃದಯಾಘಾತ, ಹೃದಯ ವೈಫಲ್ಯ ಹಾಗೂ ಹೃದಯ ಸ್ತಂಭನ. ಇವುಗಳಿಗೆ ನಾನಾ ಕಾರಣಗಳಿವೆ. ಆದರೆ ನಾವು ದಿನ ನಿತ್ಯ ಸೇವಿಸುವ ಆಹಾರ ಪದ್ಧತಿಯೇ ಅತೀ ಮುಖ್ಯವಾಗಿದೆ. ಅದಕ್ಕಾಗಿ ಪ್ರತಿ ದಿನ ನಡಿಗೆ, ಲಘು ವ್ಯಾಯಾಮ ಹಾಗೂ ಆಹಾರದಲ್ಲಿ ಪಥ್ಯವನ್ನು ಹೊಂದುವುದು ಉತ್ತಮ ವಿಧಾನವಾಗಿದೆ. ಇತ್ತೀಚಿನ ದಿನಗಳಲ್ಲಿ ಯುವ ಜನತೆಯೇ ಹೆಚ್ಚಾಗಿ ಹೃದಯ ಸಂಬAಧೀ ಕಾಯಿಲೆಗಳಿಂದ ಸಾವನ್ನಪ್ಪುವುದು ಅತ್ಯಂತ ಖೇದಕರ ಸಂಗಾತಿಯಾಗಿದೆ. ಇವುಗಳಿಗೆ ಮುನ್ನೆಚ್ಚರಿಕೆಯೇ ಪರಿಹಾರ ಎಂದು ಮಂಗಳೂರು ಕೆ.ಎಂ.ಸಿ. ಆಸ್ಪತ್ರೆಯ ಖ್ಯಾತ ಹೃದಯ ತಜ್ಞರಾದ ಡಾ. ದಿತೇಶ್ ಎಂ. ತಿಳಿಸಿದರು.
ಅವರು ವಿಶ್ವ ಹೃದಯ ದಿನಾಚರಣೆಯ ಪ್ರಯುಕ್ತ ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಏರ್ಪಡಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಸವಿವರವಾದ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ರಶ್ಮಿತಾ ಜೈನ್ ಮಾತನಾಡಿ, ವಿದ್ಯಾರ್ಥಿ ಜೀವನದಿಂದಲೇ ಆರೋಗ್ಯದಲ್ಲಿ ಶಿಸ್ತು ಕಾಪಾಡಿಕೊಳ್ಳಬೇಕು ಹಾಗೂ ತನ್ನ ಪರಿಸರದ ಜನರಲ್ಲಿ ಹೃದಯ ಸಂಬAಧೀ ಕಾಯಿಲೆಗಳ ಕುರಿತಾಗಿ ಜಾಗೃತಿ ಮೂಡಿಸಬೇಕು ಎಂದರು.
ಪ್ರೌಢಶಾಲಾ ಮುಖ್ಯಶಿಕ್ಷಕರಾದ ಶಿವಪ್ರಸಾದ್ ಭಟ್ ಸ್ವಾಗತಿಸಿ, ವಂದಿಸಿ, ನಿರೂಪಿಸಿದರು.