Share this news

ಕಾರ್ಕಳ : ಕಾಂತಾವರ ಕನ್ನಡ ಸಂಘದ ಮೂರು ದತ್ತಿ ಪ್ರಶಸ್ತಿಗಳು ಘೋಷಣೆಯಾಗಿದ್ದು ಉಡುಪಿ ಜಿಲ್ಲಾ ಗಮಕ ಕಲಾ ಪರಿಷತ್ತಿನ ಅಧ್ಯಕ್ಷರಾಗಿರುವ ಸತೀಶ್ ಕುಮಾರ್ ಕೆಮ್ಮಣ್ಣು ಅವರ ಹೆಸರಿನ ಗಮಕ ಕಲಾ ಪ್ರವಚನ ಪ್ರಶಸ್ತಿಯನ್ನು ಪ್ರಸಿದ್ಧ ಗಮಕ ವಾಚನಕಾರರಾದ ಡಾ.ರಾಘವೇಂದ್ರ ರಾವ್ ಪಡುಬಿದ್ರಿ ಅವರಿಗೆ, ಪ್ರಸಿದ್ಧ ಗಮಕಿ ಉಡುಪಿಯ ಶ್ರೀಮತಿ ಯಾಮಿನಿ ಭಟ್ ಅವರು ಸ್ಥಾಪಿಸಿದ ಗಮಕ ಕಲಾ ವಾಚನ ಪ್ರಶಸ್ತಿಯನ್ನು ಶ್ರೀಮತಿ ಮಂಜುಳಾ ಸುಬ್ರಹ್ಮಣ್ಯ ಭಟ್ ಮಂಚಿ ಅವರಿಗೆ ಮತ್ತು ಭಾರತ ಸರಕಾರದ ‘ಶಿಲ್ಪಗುರು’ ಪ್ರಶಸ್ತಿ ಪುರಸ್ಕೃತ ಕಾರ್ಕಳದ ಶಿಲ್ಪಿ ಕೆ. ಶಾಮರಾಯ ಆಚಾರ್ಯ ಅವರ ಹೆಸರಿನ ದತ್ತಿನಿಧಿಯ ಶಿಲ್ಪಕಲಾ ಪ್ರಶಸ್ತಿಯನ್ನು ಶಿಲ್ಪಿ ಬಿ.ಎಸ್.ಭಾಸ್ಕರ ಆಚಾರ್ಯ ಕಾರ್ಕಳ ಅವರಿಗೆ ಘೋಷಿಸಲಾಗಿದೆ.

ಈ ಪ್ರಶಸ್ತಿಗಳು ತಲಾ ಹತ್ತು ಸಾವಿರ ರೂ. ಗಳ ನಗದು, ತಾಮ್ರ ಪತ್ರ ಮತ್ತು ಸನ್ಮಾನವನ್ನು ಒಳಗೊಂಡಿದ್ದು ಫೆಬ್ರವರಿ 26ರಂದು ಕಾಂತಾವರದಲ್ಲಿ ನಡೆಯುವ ಮುದ್ದಣ ಕಾವ್ಯ ಪ್ರಶಸ್ತಿ ಪ್ರದಾನದ ಜೊತೆ ಮೂರು ದತ್ತಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದೆಂದು ಕಾಂತಾವರ ಕನ್ನಡ ಸಂಘದ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *